Advertisement
ಸೆಪ್ಟೆಂಬರ್ 1 ರಂದು ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ಕಲಬುರಗಿ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಬೆಂಗಳೂರು ಗ್ರಾಮೀಣ, ಬೆಂಗಳೂರು ದಕ್ಷಿಣ ಕ್ಷೇತ್ರಗಳ ಮುಖಂಡರ ಸಭೆ ನಡೆಯಲಿದೆ. ಸೆ.2 ರಂದು ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ಉತ್ತರ ಕನ್ನಡ, ದಾವಣಗೆರೆ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳ ಮುಖಂಡರೊಂದಿಗೆ ಸಭೆ ನಡೆಯಲಿದೆ. ಪ್ರಮುಖವಾಗಿ ಈಗಾಗಲೇ ಪ್ರತಿ ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷದ ವಾಸ್ತವ ಪರಿಸ್ಥಿತಿ, ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಇದ್ದ ರಾಜಕೀಯ ಲೆಕ್ಕಾಚಾರ, ಈ ಬಾರಿಪಕ್ಷದ ಸಂಭಾವ್ಯ ಅಭ್ಯರ್ಥಿಗಳಾಗುವವರ ಸಂಪೂರ್ಣ ಮಾಹಿತಿ, ರಾಜಕೀಯ ಹಿನ್ನೆಲೆ, ಜಾತಿ ಪ್ರಾಬಲ್ಯ, ಎಲ್ಲ ವಿಷಯಗಳ ಬಗ್ಗೆಯೂ ಪ್ರಾಥಮಿಕ ಹಂತದಲ್ಲಿ ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.