Advertisement

ದೂರವಾಣಿ ಕದ್ದಾಲಿಕೆ: ರಾಜಭವನಕ್ಕೆ ಮುತ್ತಿಗೆ ಹಾಕಲೆತ್ನಿಸಿದ ಕಾಂಗ್ರೆಸ್‌

11:14 PM Jul 22, 2021 | Team Udayavani |

ಬೆಂಗಳೂರು: ವಿಪಕ್ಷಗಳ ನಾಯಕರ ದೂರವಾಣಿ ಕದ್ದಾಲಿಕೆ ಮಾಡಿದ ಪೆಗಾಸಸ್‌ ಗೂಢಚರ್ಯೆ ಪ್ರಕರಣವನ್ನು ಪ್ರತಿಭಟಿಸಿ ಕಾಂಗ್ರೆಸ್‌ ನಾಯಕರು ರಾಜಭವನಕ್ಕೆ ಮುತ್ತಿಗೆ ಹಾಕಲೆತ್ನಿಸಿದರು. ಪೊಲೀಸರು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಹಿತ ಹಲವಾರು ಕಾಂಗ್ರೆಸ್‌ ನಾಯಕರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.

Advertisement

ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಶಾಸಕರು ಹಾಗೂಮುಖಂಡರು, ದೂರ ವಾಣಿ ಕದ್ದಾಲಿಕೆ ಕುರಿತು ಸುಪ್ರೀಂಕೋರ್ಟ್‌ ಹಾಲಿ ನ್ಯಾಯಾಧೀಶ ರಿಂದ ತನಿಖೆ ನಡೆಸುವಂತೆ ಆಗ್ರಹಿಸಿ ಕೇಂದ್ರ ಸರಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು.

ಶಾಸಕಾಂಗ ಸಭೆಯಲ್ಲಿ ನಿರ್ಣಯ:

ಇದಕ್ಕೂ ಮುನ್ನ ವಿಧಾನಸೌಧ ದಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ,  ಡಿ.ಕೆ. ಶಿವಕುಮಾರ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್‌, ಹಿರಿಯ ಮುಖಂಡರಾದ ಎಚ್‌.ಕೆ. ಪಾಟೀಲ್‌, ಅಲ್ಲಂ ವೀರಭದ್ರಪ್ಪ,  ಕೆ.ಆರ್‌. ರಮೇಶ್‌ ಕುಮಾರ್‌, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹಮದ್‌ ಭಾಗವಹಿಸಿದ್ದರು. ಸುಪ್ರೀಂಕೋರ್ಟ್‌ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸುವ ಆಗ್ರಹದ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next