Advertisement

ಅಗ್ನಿಪಥ: ತಾಲೂಕು ಮಟ್ಟದಲ್ಲಿ ಪ್ರತಿಭಟನೆಗೆ ಕಾಂಗ್ರೆಸ್‌ ತೀರ್ಮಾನ

08:59 PM Jun 23, 2022 | Team Udayavani |

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಹಸವಾಗಿರುವ ಕೇಂದ್ರ ಸರಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ತೀರ್ಮಾನಿಸಿದೆ.

Advertisement

ಜು.27ರಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ  ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಇದರಲ್ಲಿ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಭಾಗವಹಿಸಲಿದೆ. ಆಯಾ ಕ್ಷೇತ್ರದ ಶಾಸಕರು ಅಥವಾ 2018ರ ಚುನಾವಣ ಅಭ್ಯರ್ಥಿಗಳು ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next