Advertisement

ಈಶ್ವರಪ್ಪ ರಾಷ್ಟ್ರಧ್ವಜ ವಿರೋಧಿ ಹೇಳಿಕೆ ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ಪ್ರತಿಭಟನೆ

02:56 PM Feb 21, 2022 | Team Udayavani |

ಶ್ರೀರಂಗಪಟ್ಟಣ : ಸಚಿವ ಈಶ್ವರಪ್ಪ ರಾಷ್ಟ್ರಧ್ವಜ ವಿರೋಧಿ ಹೇಳಿಕೆ ಖಂಡಿಸಿ ತಾಲೂಕು ಕಚೇರಿ ಮುಂದೆ  ಕಾಂಗ್ರೆಸ್ ಕಾರ್ಯಕರ್ತರ  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಮಾಜಿ ಶಾಸಕ ರಮೇಶ್  ಬಂಡಿಸಿದ್ದೇಗೌಡ ನೇತೃತ್ವದಲ್ಲಿ  ಪ್ರತಿಭಟನೆ ನಡೆಸಿ ಸಚಿವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಕಚೇರಿ ಮುಂದೆ ಧರಣಿ ಕುಳಿತು ಸಚಿವರ ಮತ್ತು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಕೂಡಲೇ  ಸರ್ಕಾರ ಸಚಿವ ಈಶ್ವರಪ್ಪ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.ರಾಷ್ಟ್ರ ವಿರೋಧಿ ಪ್ರಕರಣ ದಾಖಲಿಸಿ ಕ್ರಮಕ್ಕೆ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

Advertisement

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ಎನ್,ಗಂಘಾಧರ್, ಮುಖಂಡರಾದ ದಿನೇಶ, ವಿಜಯ್ ಕಯಮಸರ್,ಯುವಕಾಮಗ್ರೆಸ ಅಧ್ಯಕ್ಷ ಜಯಕುಮಾರ್, ಎಲ್.ನಾಗರಾಜು, ಶಿವಯ್ಯ, ಮಹದೇವಸ್ವಾಮಿ, ಯತೀಶ್,ಪ್ರಿಯಾ ರಮೇಶ್, ಕಾಬೂಲ್, ರವಿಶಂಕರ್ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next