Advertisement

Mangaluru: ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ… ಘಟನೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

11:57 AM Aug 23, 2024 | Team Udayavani |

ಮಂಗಳೂರು: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮನೆ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಯಿತು.

Advertisement

ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದರು. ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೊ, ಮುಖಂಡರಾದ ಪಿ.ವಿ. ಮೋಹನ್, ಎಂ.ಜಿ. ಹೆಗ್ಡೆ, ಸುರೇಶ್ ಬಲ್ಲಾಳ್, ಪದ್ಮರಾಜ್, ಪ್ರವೀಣ್ ಚಂದ್ರ ಆಳ್ವ, ಶಾಹುಲ್ಬಹಮೀದ್, ಶಾಲೆಟ್ ಪಿಂಟೋ, ವಿಶ್ವಾಸ್ ಕುಮಾರ್ ದಾಸ್, ದೇವಿಪ್ರಸಾದ್ ಶೆಟ್ಟಿ ಸಹಿತ ಮತ್ತಿತರರು ಇದ್ದರು.

ಇದನ್ನೂ ಓದಿ: Earthquake: ಕುಶಾನಗರ, ಬೈಲುಕೊಪ್ಪ ಭಾಗದಲ್ಲಿ ಭೂಕಂಪನದ ಅನುಭವ… ಜನರಲ್ಲಿ ಆತಂಕ

Advertisement

Udayavani is now on Telegram. Click here to join our channel and stay updated with the latest news.

Next