Advertisement

ಕಾಂಗ್ರೆಸ್ಸಿಗರೇ ಯಾರ ವಿರುದ್ಧ ಈ ಜನಾಕ್ರೋಶ? : ಬಿಜೆಪಿ ಪ್ರಶ್ನೆ

11:24 AM Nov 08, 2021 | Team Udayavani |

ಬೆಂಗಳೂರು : ‘ಕಾಂಗ್ರೆಸ್ಸಿಗರೇ ಯಾರ ವಿರುದ್ಧ ಈ ಜನಾಕ್ರೋಶ? 60 ವರ್ಷಗಳ ಕಾಲ ದೇಶ ಆಳಿದ ನಂತರವೂ ಅಸಮಾನತೆ, ಬಡತನವನ್ನು ಜೀವಂತವಿಟ್ಟ ಕಾರಣಕ್ಕಾಗಿ ಜನಾಕ್ರೋಶ ಸಭೆ ನಡೆಸುತ್ತೀರಾ’ ಎಂದು ರಾಜ್ಯ ಬಿಜೆಪಿ ಸೋಮವಾರ ಟ್ವೀಟ್ ಮಾಡಿದೆ.

Advertisement

‘ಜನವಿರೋಧಿ ಕಾಂಗ್ರೆಸ್‌’ ಎಂಬ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರೇ, ನಿಮ್ಮನ್ನು‌ ನೀವೇ ಕಾಂಗ್ರೆಸ್ ರಥ ಎಳೆಯುವ ಡಬಲ್ ಎಂಜಿನ್ ಎಂದು ಬಿಂಬಿಸಿಕೊಂಡಿದ್ದೀರಿ, ಶುಭವಾಗಲಿ!!! ನಿಮ್ಮ ಡಬಲ್ ಎಂಜಿನ್ ಸಂಘಟನೆ ಸಂದರ್ಭದಲ್ಲಾದರೂ ದಲಿತ ಸಿಎಂ ವಿಚಾರ ನನಸಾಗುವುದೇ? ದಲಿತರಿಗೆ ಮುಖ್ಯಮಂತ್ರಿ‌ ಪಟ್ಟ ಕಟ್ಟಲು ನಾವು ಬದ್ಧ ಎಂದು ಘೋಷಿಸಿ ನೋಡೋಣ.’ಎಂದು ಟಾಂಗ್ ನೀಡಿದೆ.

ಕಾಂಗ್ರೆಸ್ ತಿರುಗೇಟು

‘ಕೇಂದ್ರ – ರಾಜ್ಯದ ಡಬಲ್ ಎಂಜಿನ್ ಬಿಜೆಪಿ ಸರಕಾರಗಳು ಮೇಕೆದಾಟು ಯೋಜನೆ ಆರಂಭಿಸಲು ಕಾನೂನಿನ ಯಾವುದೇ ಅಡೆತಡೆ ಇಲ್ಲ.
ಆದರೂ ಈ ಎರಡೂ ಸರಕಾರಗಳು ಬದ್ಧತೆ ಪ್ರದರ್ಶಿಸುತ್ತಿಲ್ಲ.ಇದರಿಂದ ನ್ಯಾಯಾಧೀಕರಣ ಮತ್ತು ಪ್ರಾಧಿಕಾರದ ಆದೇಶದ ಅನ್ವಯ ಕರ್ನಾಟಕದ ಪಾಲಿಗೆ ಸಿಗಬೇಕಾದ ಕಾವೇರಿ ನೀರು ಸಮುದ್ರದ ಪಾಲಾಗಿ, ಪೋಲಾಗುತ್ತಿದೆ.’ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

‘ರಾಜ್ಯಾದ್ಯಂತ ಜನಾಕ್ರೋಶ ಸಭೆ ನಡೆಸುವುದಕ್ಕೆ ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next