Advertisement

ಕಾಂಗ್ರೆಸ್‌ ಮುತ್ತಿಗೆ ಸಾಧ್ಯತೆ; ಬಿಎಸ್‌ವೈ ನಿವಾಸಕ್ಕೆ ಬಿಗಿ ಭದ್ರತೆ 

12:17 PM Dec 03, 2018 | |

ಶಿವಮೊಗ್ಗ: ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ. 

Advertisement

ಮುತ್ತಿಗೆ ಹಾಕುವ ಹಿನ್ನಲೆಯಲ್ಲಿ  ವಿನೋಭ ನಗರದಲ್ಲಿ ರುವ ಬಿಎಸ್‌ವೈ ನಿವಾಸಕ್ಕೆ  ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 

ನಿವಾಸಕ್ಕೆ ತೆರಳುವ ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್‌ ಸಿಬಂದಿಗಳನ್ನು ನಿಯೋಜಿಸಲಾಗಿದೆ. ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಿಂದ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹಿರಂಗ ಸಭೆಯನ್ನೂ ಆಯೋಜಿಸಿಲಾಗಿದೆ.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೇಂದ್ರ ಸರ್ಕಾರದ ವೈಫ‌ಲ್ಯಗಳ ಪಟ್ಟಿಯನ್ನು  ನೀಡುವ ಮೂಲಕ  ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಿದ್ದಾರೆ. 

Advertisement

ಕಾರ್ಯಕರ್ತೆಯರು ಕೈಯಲ್ಲಿ ಪೊರಕೆಗಳನ್ನು ಹಿಡಿದಿದ್ದಾರೆ. ಎತ್ತಿನಗಾಡಿಯಲ್ಲಿ ಗ್ಯಾಸ್‌ ಸಿಲಿಂಡರ್‌ ಇರಿಸಿ ವಿಭಿನ್ನವಾಗಿ ಪ್ರತಿಭಟಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next