Advertisement

ಮಲ್ಯ, ಚೋಕ್ಸಿ,ರಾಮದೇವ್ ಸಾಲ ಮನ್ನಾ: ಕೇಂದ್ರದ ನಡೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

08:08 AM Apr 30, 2020 | keerthan |

ಬೆಂಗಳೂರು: ಕೇಂದ್ರ ಸರ್ಕಾರ ಉದ್ಯಮಿಗಳ ಬಹುಕೋಟಿ ಸಾಲಮನ್ನಾ ಮಾಡಿರುವ ವಿಚಾರವನ್ನು ವಿರೋಧಿಸಿ ರಾಜ್ಯ ಕಾಂಗ್ರಸ್ ನಿಂದ ಮೌನ ಧರಣಿ ನಡೆಸಲಾಯಿತು.

Advertisement

ವಿಜಯ್ ಮಲ್ಯ, ಮೆಹುಲ್ ಚೋಕ್ಸಿ, ರಾಮದೇವ್ ಮುಂತಾದ ಉದ್ಯಮಿಗಳ ಸಾಲವನ್ನು ಕೇಂದ್ರ ಸರಕಾರ ಮನ್ನಾ ಮಾಡಿದೆ, ಆದರೆ ಜನಸಾಮಾನ್ಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿಲ್ಲ ಎಂದು ವಿರೋಧಿಸಿ ಮೂವರು ಉದ್ಯಮಿಗಳ ಫೋಸ್ಟರ್ ಹಿಡಿದುಕೊಂಡು ಮೌನ ಪ್ರತಿಭಟನೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ರಾಹುಲ್ ಗಾಂಧಿ ಅವರ ಸಾಲದ ಬಗ್ಗೆ ಸಂಸತ್ತಿನಲ್ಲೇ ಪ್ರಸ್ತಾಪಿಸಿದ್ದರು. ಈಗ ಕೇಂದ್ರ ಸರ್ಕಾರ ಅವರ ಸಾಲ ಮನ್ನಾ ಮಾಡಿದೆ. ಇಂತಹ ಸಂದರ್ಭದಲ್ಲಿ 68 ಸಾವಿರ ಕೋಟಿ ಸಾಲ ಮನ್ನಾಮಾಡಿದ್ದೇಕೆ? ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಜನಸಾಮಾನ್ಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿಲ್ಲ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಆದರೆ ಉದ್ಯಮಿಗಳ ಪರವಾಗಿ ಸರ್ಕಾರ ವರ್ತಿಸುತ್ತಿದೆ ಎಂದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದೇಕೆ? ಅವರು ದೇಶದ ಜನತೆಗೆ ಸತ್ಯ ಹೇಳಬೇಕು. ದೇಶಕ್ಕೆ ದ್ರೋಹ ಬಗೆದಿರುವ ಅವರು ರಾಜಿನಾಮೆ ನೀಡಬೇಕು ಎಂದು  ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next