Advertisement

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

04:34 PM Feb 11, 2021 | Team Udayavani |

ತಿಪಟೂರು: ಕೇಂದ್ರ ಸರ್ಕಾರ ತೈಲ ಬೆಲೆಗಳನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ತಾಲೂಕು ಕಾಂಗ್ರೆಸ್‌ ಸಮಿತಿ ವತಿಯಿಂದ ಮಾಜಿ ಶಾಸಕ ಕೆ. ಷಡಕ್ಷರಿ ನೇತೃತ್ವದ ಲ್ಲಿ ಬುಧವಾರ ನಗರದ ಶ್ರೀ ಕೆಂಪಮ್ಮದೇವಿ ದೇವಾಲಯದಿಂದ ದೊಡ್ಡಪೇಟೆ ಮಾರ್ಗದಲ್ಲಿ ಬಿ.ಎಚ್‌. ರಸ್ತೆ ಮುಖಾಂತರ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ಬುಧವಾರ ನಡೆಸಲಾಯಿತು.

Advertisement

ಪಾದಯಾತ್ರೆ ಮೂಲಕ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ತಹ ಶೀಲ್ದಾರ್‌ ಚಂದ್ರಶೇಖರ್‌ಗೆ ಮನವಿ ಸಲ್ಲಿಸಿ ಮಾಜಿ ಶಾಸಕ ಕೆ.ಷಡಕ್ಷರಿ ಮಾತನಾಡಿ, ಕೇಂದ್ರ ಸರ್ಕಾರ ಒಂದೇ ಸಮ ಪೆಟ್ರೋಲ್‌, ಡೀಸೆಲ್‌ ಮತ್ತು ಅಡುಗೆ ಅನಿಲ ದರಗಳನ್ನು ಹೆಚ್ಚಿಸುತ್ತಿರುವುದು ಸರಿಯಲ್ಲ. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಹೊರೆ ಯಾಗಲಿದ್ದು ಜೀವನ ನಡೆಸುವುದು ಕÐಕರr ‌ವಾಗಿದೆ ಎಂದರು.

ರೈತ ಪರ, ಜನಸಾಮಾನ್ಯರ ಪರ ಸರ್ಕಾರ ಎಂದು ಬಾಯಿ ಮಾತಿನಲ್ಲಿ ಹೇಳುವ ಮೋದಿ ಸರ್ಕಾರ ಇಂಧನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆಗಳನ್ನು ಗಗನಕ್ಕೇರಿಸುವ ಮೂಲಕ ಶ್ರೀಸಾಮಾನ್ಯರ ಬದುಕಿ ನಲ್ಲಿ ಚೆಲ್ಲಾಟವಾಡುತ್ತಿದೆ. ಕೊರೊನಾದಿಂದಾಗಿ ಜನರ ಜೀವನ ಇನ್ನೂ ಸುಧಾರಣೆಯಾಗಿಲ್ಲ.

ಸಾಲ ಮಾಡಿ ಕೊಂಡು ಜೀವನ ನಡೆಸುತ್ತಿರುವ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ದಿಢೀರನೆ ಬೆಲೆಗಳನ್ನು ಏರಿಸುವ ಮೂಲಕ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡು ವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಡ ಜನರ ಕಷ್ಟ ಅವರಿಗೆ ಅರ್ಥಮಾಡಿಕೊಳ್ಳದೆ ತಾವು ಮಾಡಿದ್ದೇ ಕಾನೂನು ಎಂಬಂತಾಗಿದೆ. ರೈಲ್ವೆ ಖಾಸಗೀಕರಣ, ಕೃಷಿ ಕಾಯ್ದೆ ತಿದ್ದುಪಡಿಯಿಂದಾಗಿ ರೈತರಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಪ್ರತಿಭಟನೆ, ಧರಣಿ ನಡೆಸುತ್ತಿದ್ದರೂ ಕವಡೆಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಉದ್ಯೋಗ ಸೃಷ್ಟಿಸುತ್ತೇವೆಂದು ಹೇಳಿ ಯುವಕರಿಗೆ ಉದ್ಯೋಗವಿಲ್ಲದೆ ನಿರುದ್ಯೋಗ ಸಮಸ್ಯೆಯನ್ನು ಎದುರಿಸುವಂತಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದ ಯಾವ ಕಾನೂನುಗಳು ಸಮರ್ಪಕವಾಗಿಲ್ಲ. ಜನಸಾಮಾನ್ಯರಿ ಗೆ ಹೊರೆಯಾಗುವಂತಹ ಕೆಲಸವನ್ನು ಪ್ರಧಾನಿ ಮೋದಿಯವರು ಮಾಡುತ್ತಿದ್ದಾರೆ. ಯುವಕರು ಈಗಲೇ ಎಚ್ಚೆತ್ತುಕೊಂಡರೆ ಸರಿ ಇಲ್ಲವಾದಲ್ಲಿ ಗುಲಾ ಮ ರಾಗಿ ಬದುಕಬೇಕಾಗುತ್ತದೆ ಎಂದು ಕಿಡಿ ಕಾರಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೆ ಇಂಧನ ಬೆಲೆ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯವಸ್ತುಗಳ ಬೆಲೆಯನ್ನು ಕಡಿಮೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ನಮ್ಮ ಹೋರಾಟವನ್ನು ತೀವ್ರಗತಿಯಲ್ಲಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

ಇದನ್ನೂ ಓದಿ:ಮುಂದುವರಿದ ರಾಗಿಂಗ್ ಹಾವಳಿ: ಮಂಗಳೂರಿನಲ್ಲಿ 11 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಬ್ಲಾಕ್‌ ಕಾಂಗ್ರೆಸ್‌ ತಾ. ಅಧ್ಯಕ್ಷ ಮಡೇನೂರು ಕಾಂತರಾಜು, ತಾಪಂ ಅಧ್ಯಕ್ಷ ಜಿ.ಎಸ್‌.ಶಿವಸ್ವಾಮಿ, ಉಪಾಧ್ಯಕ Ò ಶಂಕರ್‌, ಮಾಜಿ ಅಧ್ಯಕ್ಷ ಸುರೇಶ್‌ ನ್ಯಾಕೇನಹಳ್ಳಿ, ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಸೈಫ‌ುಲ್ಲಾ, ನಗರ ಕಾಂಗ್ರೆಸ್‌ ಅಧ್ಯಕ್ಷ ಟಿ.ಎನ್‌. ಪ್ರಕಾಶ್‌, ನಗರಸಭಾ ಸದಸ್ಯ ರಾದ ವಿ.ಯೋಗೇಶ್‌, ಪ್ರಭುಕೋಟೆ, ವಿನುತಾ, ಮೇಘನಾ, ಮಹೇಶ್‌, ಅಣ್ಣಯ್ಯ, ಗೌಸ್‌, ಮುಖಂಡರಾದ ಬಜಗೂರು ಮಂಜು ನಾಥ್‌, ಜುಬೇರ್‌, ಮಾದೀಹಳ್ಳಿ ಪ್ರಕಾಶ್‌, ಲೋಕ ನಾಥ್‌ ಸಿಂಗ್‌, ಸುಜಿತ್‌ ಭೂಷಣ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next