Advertisement

ರಾಜ್ಯ ಸರಕಾರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

12:16 PM Aug 11, 2019 | Team Udayavani |

ನರಗುಂದ: ತಾಲೂಕಿನ ಕೊಣ್ಣೂರ ಗ್ರಾಮದ ಪ್ರವಾಹ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಭೇಟಿ ವೇಳೆ ಸಂತ್ರಸ್ತರ ಮೇಲೆ ಲಘು ಲಾಠಿ ಪ್ರಹಾರ ಮಾಡಿದ್ದು ಖಂಡನೀಯ ಎಂದು ಆರೋಪಿಸಿ ರಾಜ್ಯ ಸರ್ಕಾರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಶನಿವಾರ ನರಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರವೀಣ ಯಾವಗಲ್ಲ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪಟ್ಟಣದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಶಿವಾಜಿ ವೃತ್ತದಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರವೀಣ ಯಾವಗಲ್ಲ ಮಾತನಾಡಿ, ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿ ಸಂತ್ರಸ್ತರಿಗೆ ಯಾವುದೇ ಭರವಸೆ ನೀಡದೆ ಕಾಟಾಚಾರಕ್ಕೆ ಸಂತ್ರಸ್ತರ ಭೇಟಿ ಮಾಡಿದ್ದು ಖಂಡನೀಯ. ಸಂತ್ರಸ್ತರ ದುಃಖ ಆಲಿಸಲು ಮುಖ್ಯಮಂತ್ರಿಗಳಿಂದ ಆಗಲಿಲ್ಲ ಎಂಬುದನ್ನು ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌ ಪಕ್ಷದ ತಾಲೂಕು ಉಪಾಧ್ಯಕ್ಷ ವಿಠಲ ಶಿಂಧೆ, ಜಿಲ್ಲಾ ಪ್ರಧಾನಕಾರ್ಯದರ್ಶಿ ರಾಜು ಕಲಾಲ ಮಾತನಾಡಿದರು.

ತಾಲೂಕು ಪಂಚಾಯತ್‌ ಅಧ್ಯಕ್ಷ ಪ್ರಭುಲಿಂಗಪ್ಪ ಯಲಿಗಾರ, ಪುರಸಭೆ ಸದಸ್ಯರಾದ ಅಪ್ಪಣ್ಣ ನಾಯ್ಕರ, ರಾಜೇಶ್ವರಿ ವೀರನಗೌಡ್ರ, ಬಸವರಾಜ ಕೆಳಗೇರಿ ಮತ್ತು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next