Advertisement

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

12:46 AM Apr 26, 2024 | Team Udayavani |

ವಿಜಯಪುರ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎ. 26ರಂದು ವಿಜಯಪುರ, ಬಳ್ಳಾರಿಗೆ ಆಗಮಿಸಲಿದ್ದಾರೆ. ಅವರು ಅಪರಾಹ್ನ 1.10ಕ್ಕೆ ನಗರದ ಬಿಎಲ್‌ಡಿಇ ಸಂಸ್ಥೆಯ ಹೊಸ ಕ್ಯಾಂಪಸ್‌ನಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರು ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಲಿದ್ದಾರೆ. ಅಪರಾಹ್ನ 3.30ಕ್ಕೆ ಬಳ್ಳಾರಿ ತಲುಪಿ, ಅಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಸಂಜೆ 5.25ಕ್ಕೆ ಬಳ್ಳಾರಿಯಿಂದ ವಿಶೇಷ ವಿಮಾನದಲ್ಲಿ ಹೊಸದಿಲ್ಲಿಗೆ ಮರಳಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next