Advertisement

Congress Rajasthan 100 ಯೂನಿಟ್‌ ವಿದ್ಯುತ್ ಫ್ರೀ : ಸಿಎಂ ಗೆಹ್ಲೋಟ್

12:02 AM Jun 01, 2023 | Team Udayavani |

ಜೈಪುರ : ಹಣದುಬ್ಬರ ಪರಿಹಾರ ಶಿಬಿರಗಳನ್ನು ವೀಕ್ಷಿಸಿ ಸಾರ್ವಜನಿಕರೊಂದಿಗೆ ಮಾತನಾಡಿ, ವಿದ್ಯುತ್ ಬಿಲ್ ನಲ್ಲಿ ಸ್ಲ್ಯಾಬ್ ವಾರು ವಿನಾಯಿತಿಯಲ್ಲಿ ಸ್ವಲ್ಪ ಬದಲಾವಣೆ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.ಮೇ ತಿಂಗಳಿನಲ್ಲಿ ವಿದ್ಯುತ್ ಬಿಲ್‌ಗಳಲ್ಲಿ ಇಂಧನ ಹೆಚ್ಚುವರಿ ಶುಲ್ಕದ ಬಗ್ಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದ್ದು, ಅದರ ಆಧಾರದ ಮೇಲೆ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರಾಜಸ್ಥಾನ ಸಿಎಂ ಸಿಎಂ ಅಶೋಕ್ ಗೆಹ್ಲೋಟ್ ಬುಧವಾರ ಟ್ವೀಟ್ ಮಾಡಿದ್ದಾರೆ.

Advertisement

ತಿಂಗಳಿಗೆ 100 ಯೂನಿಟ್ ವರೆಗೆ ವಿದ್ಯುತ್ ಬಳಕೆ ಮಾಡುವವರ ವಿದ್ಯುತ್ ಬಿಲ್ ಶೂನ್ಯವಾಗಿರುತ್ತದೆ. ಅವರು ಮುಂಗಡವಾಗಿ ಯಾವುದೇ ಬಿಲ್ ಪಾವತಿಸಬೇಕಾಗಿಲ್ಲ. ತಿಂಗಳಿಗೆ 100 ಯೂನಿಟ್‌ಗಿಂತ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುವುದು, ಅಂದರೆ, ಎಷ್ಟೇ ಬಿಲ್ ಬಂದರೂ ಮೊದಲ 100 ಯೂನಿಟ್‌ಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ವಿಶೇಷವಾಗಿ ಮಧ್ಯಮ ವರ್ಗದ ಜನರು, ತಿಂಗಳಿಗೆ 200 ಯೂನಿಟ್‌ವರೆಗೆ ವಿದ್ಯುತ್ ಬಳಸುವ ಗ್ರಾಹಕರು, ಮೊದಲ 100 ಯೂನಿಟ್ ವಿದ್ಯುತ್ ಉಚಿತ, ಜತೆಗೆ 200 ಯೂನಿಟ್‌ಗಳವರೆಗೆ ಸ್ಥಿರ ಶುಲ್ಕಗಳು, ಇಂಧನ ಹೆಚ್ಚುವರಿ ಶುಲ್ಕ ಮತ್ತು ಇತರ ಎಲ್ಲಾ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ. ರಾಜ್ಯ ಸರ್ಕಾರದಿಂದ ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.

ಜೈಪುರ : ಹಣದುಬ್ಬರ ಪರಿಹಾರ ಶಿಬಿರಗಳನ್ನು ವೀಕ್ಷಿಸಿ ಸಾರ್ವಜನಿಕರೊಂದಿಗೆ ಮಾತನಾಡಿ, ವಿದ್ಯುತ್ ಬಿಲ್ ನಲ್ಲಿ ಸ್ಲ್ಯಾಬ್ ವಾರು ವಿನಾಯಿತಿಯಲ್ಲಿ ಸ್ವಲ್ಪ ಬದಲಾವಣೆ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.ಮೇ ತಿಂಗಳಿನಲ್ಲಿ ವಿದ್ಯುತ್ ಬಿಲ್‌ಗಳಲ್ಲಿ ಇಂಧನ ಹೆಚ್ಚುವರಿ ಶುಲ್ಕದ ಬಗ್ಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದ್ದು, ಅದರ ಆಧಾರದ ಮೇಲೆ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರಾಜಸ್ಥಾನ ಸಿಎಂ ಸಿಎಂ ಗೆಹ್ಲೋಟ್ ಬುಧವಾರ ಟ್ವೀಟ್ ಮಾಡಿದ್ದಾರೆ.

ತಿಂಗಳಿಗೆ 100 ಯೂನಿಟ್ ವರೆಗೆ ವಿದ್ಯುತ್ ಬಳಕೆ ಮಾಡುವವರ ವಿದ್ಯುತ್ ಬಿಲ್ ಶೂನ್ಯವಾಗಿರುತ್ತದೆ. ಅವರು ಮುಂಗಡವಾಗಿ ಯಾವುದೇ ಬಿಲ್ ಪಾವತಿಸಬೇಕಾಗಿಲ್ಲ. ತಿಂಗಳಿಗೆ 100 ಯೂನಿಟ್‌ಗಿಂತ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುವುದು, ಅಂದರೆ, ಎಷ್ಟೇ ಬಿಲ್ ಬಂದರೂ ಮೊದಲ 100 ಯೂನಿಟ್‌ಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Advertisement

ವಿಶೇಷವಾಗಿ ಮಧ್ಯಮ ವರ್ಗದ ಜನರು, ತಿಂಗಳಿಗೆ 200 ಯೂನಿಟ್‌ವರೆಗೆ ವಿದ್ಯುತ್ ಬಳಸುವ ಗ್ರಾಹಕರು, ಮೊದಲ 100 ಯೂನಿಟ್ ವಿದ್ಯುತ್ ಉಚಿತ, ಜತೆಗೆ 200 ಯೂನಿಟ್‌ಗಳವರೆಗೆ ಸ್ಥಿರ ಶುಲ್ಕಗಳು, ಇಂಧನ ಹೆಚ್ಚುವರಿ ಶುಲ್ಕ ಮತ್ತು ಇತರ ಎಲ್ಲಾ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ. ರಾಜ್ಯ ಸರ್ಕಾರದಿಂದ ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next