Advertisement

ಕಾಂಗ್ರೆಸ್‌ ಸರ್ಕಾರದ ಹಗರಣಗಳ ಮರು ತನಿಖೆ: ಯಡಿಯೂರಪ್ಪ

06:20 AM Jan 15, 2018 | |

ಮಾಲೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್‌ ಸರಕಾರದ ಎಲ್ಲಾ ಹಗರಣಗಳ ಮರು ತನಿಖೆಗೆ ಆದೇಶಿಸದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕಿಡಿ ಕಾರಿದ್ದಾರೆ.

Advertisement

ಕೋಲಾರ ಜಿಲ್ಲೆ ಮಾಲೂರಿನಲ್ಲಿ ಪರಿವರ್ತನಾ ರ್ಯಾಲಿಯಲ್ಲಿ ಅವರು ಮಾತನಾಡಿದರು. ಕಳೆದ ನಾಲ್ಕೂವರೆ ವರ್ಷಗಳಿಂದ ಮಧ್ಯವರ್ತಿಗಳ ಮೂಲಕ ಆಡಳಿತ ನಡೆಸುತ್ತಾ ರಾಜ್ಯವನ್ನು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಎಲ್ಲಾ ತನಿಖಾ ಸಂಸ್ಥೆಗಳನ್ನು ತಮ್ಮ
ಕೈವಶದಲ್ಲಿರಿಸಿಕೊಂಡಿದೆ. ತಮ್ಮ ಮೇಲೆ ದಾಖಲಾಗಿರುವ ಸುಮಾರು 70ಕ್ಕೂ ಹೆಚ್ಚು ಪ್ರಕರಣಗಳನ್ನು ಮುಚ್ಚಿಹಾಕುವ ಹುನ್ನಾರ ನಡೆಸುತ್ತಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಎಲ್ಲಾ ಹಗರಣಗಳ ಮರು ತನಿಖೆಗೆ ಆದೇಶ ಮಾಡುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next