Advertisement

ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ನಾಮಪತ್ರ

11:40 AM Apr 25, 2018 | Team Udayavani |

ಕೆ.ಆರ್‌.ಪುರ: ಸತತ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್‌ ಟಿಕೆಟ್‌ ವಂಚಿತರಾಗಿರುವ ಕಾಂಗ್ರೆಸ್‌ ಮುಖಂಡ ನಲ್ಲೂರಹಳ್ಳಿ ಟಿ.ನಾಗೇಶ್‌, ಮಹದೇವಪುರ ವಿಧಾನಸಬಾ ಕ್ಷೇತದ್ರ ಪಕ್ಷೇತರ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

Advertisement

2008 ಮತ್ತು 2013ರ ವಿಧಾನಸಭೆ ಚುನಾವಣೆಗಳಲ್ಲಿ ನಾಗೇಶ್‌ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷದಿಯಾಗಿದ್ದರು. ಆದರೆ ಪಕ್ಷ ಇವರಿಗೆ ಮಣೆ ಹಾಕಿರಲಿಲ್ಲ. ಹೀಗಾಗಿ ಈ ಬಾರಿ ಟಿಕೆಟ್‌ ಸಿಕ್ಕೇ ಸಿಗುತ್ತದೆ ಎಂಬ ನಾಗೇಶ್‌ರ ವಿಶ್ವಾಸ ಈ ಬಾರಿಯೂ ಹುಸಿಯಾಗಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌ಗೆ ಪಕ್ಷ ಟಿಕೆಟ್‌ ನೀಡಿದೆ.

ಇದರಿಂದ ಬೇಸರಗೊಂಡ ನಾಗೇಶ್‌ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ತಮ್ಮ ಸಾವಿರಾರು ಬೆಂಬಲಿಗರ ಜತೆ ಮಂಗಳವಾರ ವೈಟ್‌ಫೀಲ್ಡ್‌ನಿಂದ ಕೆ.ಆರ್‌.ಪುರ ತಾಲೂಕು ಕಚೇರಿವರೆಗೆ ರ್ಯಾಲಿಯಲ್ಲಿ ಬಂದು ನಾಗೇಶ್‌ ನಾಮಪತ್ರ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next