Advertisement

ಆಪ್‌ ವಿರುದ್ಧ ಕಾಂಗ್ರೆಸ್‌ನಿಂದ ಸುಳ್ಳು ಭರವಸೆ ಚಾರ್ಜ್‌ ಶೀಟ್‌

04:48 PM Feb 14, 2018 | Team Udayavani |

ಹೊಸದಿಲ್ಲಿ : ಕಾಂಗ್ರೆಸ್‌ ಪಕ್ಷ ಇಂದು ಬುಧವಾರ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷದ ದಿಲ್ಲಿ ಸರಕಾರ ಮೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಅದು ನೀಡಿರುವ ಸುಳ್ಳು ಭರವಸೆಗಳ ಚಾರ್ಜ್‌ ಶೀಟ್‌ ಬಿಡುಗಡೆ ಮಾಡಿದೆ.

Advertisement

ದಿಲ್ಲಿ ಕಾಂಗ್ರೆಸ್‌ ಮುಖ್ಯಸ್ಥ ಅಜಯ್‌ ಮಾಕನ್‌ ಮತ್ತು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ಅವರು ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಚಾರ್ಜ್‌ ಶೀಟ್‌ ಬಿಡುಗಡೆಗೊಳಿಸಿದರು.

ಆಮ್‌ ಆದ್ಮಿ ಸರಕಾರ ಸುಳ್ಳು ಭರವಸೆಗಳ ಬುನಾದಿಯ ಮೇಲೆ ನಿಂತಿದೆ ಎಂದು ಆರೋಪಿಸಿದ ಮಾಕನ್‌, ಕೇಜ್ರಿವಾಲ್‌ ಸರಕಾರ ಅಧಿಕಾರಕ್ಕೆ ಬಂದಂದಿನಿಂದ ಈ ತನಕ ಯಾವುದೇ ಭರವಸೆಯನ್ನು ಈಡೇರಿಸಿಲ್ಲ ಎಂದು ಟೀಕಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next