Advertisement

Karnataka poll 2023; ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದ ಕಾಂಗ್ರೆಸ್

03:35 PM Apr 05, 2023 | Team Udayavani |

ಬೆಂಗಳೂರು : ಖ್ಯಾತ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ”ಬಸವರಾಜ್ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ” ಎಂದು ವ್ಯಂಗ್ಯವಾಡಿದೆ.

Advertisement

”ಮೋದಿ ಮುಖ ತೋರಿಸಿದರೂ ವೋಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಬಸವರಾಜ್ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ.ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ!. ಯಡಿಯೂರಪ್ಪ ಅವರ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ!” ಎಂದು ಟ್ವೀಟ್ ಮಾಡಿದೆ.

ವಿಧಾನ ಸಭಾ ಚುನಾವಣೆಯ ಕಾವು ಏರಿರುವ ವೇಳೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತನಾಡಿ”ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ , ಬಿಜೆಪಿ ಪರ ಪ್ರಚಾರ ಮಾಡುತ್ತೇನೆ ಎಂದು ರಾಜಕೀಯ ಸಂಚಲನ ಮೂಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next