Advertisement

ಕಾಂಗ್ರೆಸ್‌ 3ನೇ ಸ್ಥಾನ ಬಿಟ್ಟುಕೊಡಲಿ: ಎಚ್‌ಡಿಡಿ

06:40 AM Mar 13, 2018 | Team Udayavani |

ಬೆಳಗಾವಿ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮೂರನೇ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕೆಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು. 

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು  ಈ ಹಿಂದೆ ಮಾತುಕತೆ ನಡೆಸಿದಂತೆ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಟ್ಟಿದ್ದೆವು. ಅದನ್ನು ಅವರು ನೆನಪು ಮಾಡಿಕೊಳ್ಳಬೇಕು ಎಂದರು. ಜೆಡಿಎಸ್‌ನಿಂದ ಈಗ ಫಾರೂಕ್‌ ನಾಮಪತ್ರ ಸಲ್ಲಿಸಿದ್ದಾರೆ. ಈಗಲೂ ಕಾಂಗ್ರೆಸ್‌ ನಮಗೆ ನೆರವಾಗಬಹುದು ಎಂಬ ವಿಶ್ವಾಸದಲ್ಲಿದ್ದೇವೆ ಎಂದು ದೇವೇಗೌಡ  ಹೇಳಿದರು.

ಅಶೋಕ ಖೇಣಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಖೇಣಿ ಸೇರ್ಪಡೆಯನ್ನು ಸ್ವತಃ ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರಶ್ನೆ ಮಾಡಿದ್ದಾರೆ. ಹೀಗಿರುವಾಗ ಕಾಂಗ್ರೆಸ್‌ ಇದಕ್ಕೆ ಉತ್ತರ ನೀಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next