Advertisement

ಐಟಿ ದಾಳಿಗಳಿಗೆ ಕಾಂಗ್ರೆಸ್‌ ಸಹಕರಿಸಬೇಕು: ಅನಂತ್‌ ಕುಮಾರ್‌

08:50 AM Aug 04, 2017 | Team Udayavani |

ಬೆಂಗಳೂರು: ಐಟಿ ದಾಳಿ ಭ್ರಷ್ಟಾಚಾರ ವಿರುದ್ಧದ ಹೋರಾಟವಾಗಿದ್ದು, ಕರ್ನಾಟಕ ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಮನೆ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಬಾರದು ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಅವರು ಗುರುವಾರ ದಿಲ್ಲಿಯಲ್ಲಿ ಹೇಳಿ¨ªಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕಪ್ಪು ಹಣದ ಪಿಡುಗನ್ನು ಬುಡ ಸಮೇತ ಕಿತ್ತು ಹಾಕಲು ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಇಂತಹ ಕಾರ್ಯಾಚರಣೆಗಳಿಗೆ ಕರ್ನಾಟಕ ಸರಕಾರ ಹಾಗೂ ಕಾಂಗ್ರೆಸ್‌ ಪಕ್ಷ ಸಹಕಾರ ನೀಡಬೇಕಿದೆ ಎಂದು ಹೇಳಿ¨ªಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next