Advertisement

ಕಾಂಗ್ರೆಸ್‌ನಿಂದ ಉಚಿತ ಯೋಜನೆಗಳ ನಾಟಕ

02:33 PM Mar 07, 2023 | Team Udayavani |

ಗುಂಡ್ಲುಪೇಟೆ: ತಾಲೂಕಿನ ಶಿವಪುರ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್‌ ಉದ್ಘಾಟನೆ ಹಾಗೂ ಉಪ್ಪಾರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸೋಮವಾರ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಅವರು ಭೂಮಿಪೂಜೆ ನೆರವೇರಿಸಿದರು.

Advertisement

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕಾಂಗ್ರೆಸ್‌ ಪಕ್ಷವು ಉಚಿತ ಯೋಜನೆಗಳ ಕುರಿತು ನಾಟಕವಾ ಡುತ್ತಿದೆ. ಈ ಹಿಂದೆ 5 ವರ್ಷ ಆಡಳಿತ ನಡೆಸಿದ ವೇಳೆ ಇವು ಏಕೆ ನೆನಪಾಗಲಿಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದೂ ಉಚಿತ ಯೋಜನೆಗಳನ್ನು ಕೊಡಲು ಸಾಧ್ಯವಿಲ್ಲ ಎಂದು ಕುಟುಕಿದರು.

ಕ್ಷೇತ್ರದಲ್ಲಿ ಹಿಂದೆ ಆಡಳಿತ ನಡೆಸಿದವರು ಗಲಾಟೆ ಸೃಷ್ಟಿಸಿ ಪೊಲೀಸ್‌ ಠಾಣೆಯಲ್ಲಿ ರಾಜಕೀ ಯ ಮಾಡುತ್ತಿದ್ದರು. ತಮ್ಮ ಅವಧಿಯಲ್ಲಿ ಉತ್ತಮ ಕೆಲಸಗಳಾಗಿದ್ದು, ಕಾಡಂಚಿನ ಗ್ರಾಮಗಳಾದ ಮಂಗಲಕ್ಕೆ 50 ಲಕ್ಷ, ಏಲಚೆಟ್ಟಿಗೆ 25 ಲಕ್ಷ ರೂ, ಚಿಕ್ಕತುಪ್ಪೂರಿನಲ್ಲಿ ಬಸವ ಭವನ ನಿರ್ಮಾಣ, ಬೆರಟಹಳ್ಳಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಸೇರಿದಂತೆ ಸಾಕಷ್ಟು ಅನುದಾನ ಹಾಕಿ ಅಭಿವೃದ್ಧಿ ಮಾಡಲಾಗಿದೆ. ನಿಮ್ಮ ಅವಧಿಯಲ್ಲಿ ದೊಡ್ಡ ಲೀಡರ್‌ಗಳಿದ್ದರೂ ಯಾಕೆ ಇಷ್ಟೊಂದು ಪ್ರಮಾಣದ ಕೆಲಸ ಮಾಡಲಿಲ್ಲ ಎಂದು ವಿರೋಧ ಪಕ್ಷದವರನ್ನು ಟೀಕಿಸಿದರು.

ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಹೊರೆಯಾಲ ಮಹೇಶ್‌, ಮಂಡಲ ಅಧ್ಯಕ್ಷ ದೊಡ್ಡಹುಂಡಿ ಜಗದೀಶ್‌, ಬಸವೇಶ್‌, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಪ್ರಣಯ್‌, ನಮೋ ಮಂಜು ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next