Advertisement

ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ಇಬ್ಭಾಗ

06:20 AM Oct 25, 2018 | |

ಮುಧೋಳ: ಲೋಕಸಭೆ ಚುನಾವಣೆ ವೇಳೆಗೆ ದೇಶದಲ್ಲಿ ಕಾಂಗ್ರೆಸ್‌ ಇಬ್ಭಾಗವಾಗಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ಸಿಗರೇ ಒಪ್ಪುತ್ತಿಲ್ಲ. ಇನ್ನು ದೇಶದ ಜನರು ಒಪ್ಪುವುದು ದೂರದ ಮಾತು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಗೋವಿಂದ ಕಾರಜೋಳ ಹೇಳಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್‌ ಪ್ರಧಾನಿ ಅಭ್ಯರ್ಥಿ ಅಲ್ಲ.2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸುವುದಿಲ್ಲ ಎಂದು ಚಿದಂಬರಂ ಹೇಳಿದ್ದಾರೆ. ಇದರಿಂದ ಕಾಂಗ್ರೆಸ್ಸಿನಲ್ಲಿ ಭಾರೀ ಗೊಂದಲ ಉಂಟಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next