Advertisement

Chikkamagalur:ನಿಜ ಹೇಳಿದರೆ ಸಿ.ಟಿ ರವಿ ಉರಿದು ಬೀಳುತ್ತಾರೆ: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

03:54 PM Aug 17, 2023 | Team Udayavani |

ಚಿಕ್ಕಮಗಳೂರು: ಸಿ.ಟಿ.ರವಿ ಮಾತ್ರ ಎಲ್ಲಾ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದು. ಅವರ ಬಗ್ಗೆ ನಿಜ ಹೇಳಿದರೆ ಕೆಳಗಿನಿಂದ ಮೇಲಿನವರೆಗೂ ಉರಿದು ಬೀಳುತ್ತಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

Advertisement

ಚಿಕ್ಕಮಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2020 ರಲ್ಲಿ ಸಿ.ಟಿ.ರವಿ ಎಲ್ಲೆಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿದ್ದಾರೆಂದು ಪ್ರಶ್ನಿಸಿದ್ದೆ. ಸತ್ಯಹರಿಶ್ಚಂದ್ರನಂತೆ ಮಾತನಾಡ್ತೀರಾ, ನಿಮ್ಮ ಹಿನ್ನೆಲೆ ಏನೆಂದು ಪ್ರಶ್ನಿಸಿದ್ದೆ. ನೀವು ಬ್ಯುಸಿನೆಸ್ ಮ್ಯಾನ್, ಎಜುಕೇಶನ್ ಲಿಸ್ಟ್, ಇಂಡಸ್ಟ್ರಿಯಲಿಸ್ಟ್, ರಿಯಲ್ ಎಸ್ಟೇಟ್ ಏನೆಂದು ಜನರಿಗೆ ತಿಳಿಸಿ ಎಂದಿದ್ದೆ. ಜನ ಹೇಳುತ್ತಿದ್ದಾರೆ, ನೀವು ಲೂಟಿ ರವಿ ಎಂದು ಪ್ರಶ್ನೆ ಮಾಡಿದ್ದೆ. ಸಿ.ಟಿ. ರವಿ ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದರು. ಇಂದು ಬೇಲ್ ಆಗಿದೆ. ಇತರೆ ಬಿಜೆಪಿ ಮುಖಂಡರು ಕೂಡ ಬೆಂಗಳೂರು, ಮೈಸೂರಿನಲ್ಲಿ ಕೇಸ್ ದಾಖಲಿಸಿದ್ದಾರೆ ಎಂದರು.

ಬಿಜೆಪಿ, ಮೋದಿ, ಸಿ.ಟಿ.ರವಿ ವಿರುದ್ಧ ಮಾತನಾಡಿದರೇ, ಕೇಸ್ ಹಾಕಿ, ಇಡಿ, ಸಿಬಿಐ, ಪೊಲೀಸ್ ಮೂಲಕ ಹೆದರಿಸಲು ಪ್ರಯತ್ನಿಸುತ್ತಾರೆ. ಬಿಜೆಪಿಯವರ ಈ ಬೆದರಿಕೆಗೆ ನಾವು ಬೆದರುವ ವಂಶಸ್ಥರಲ್ಲ, ಕಾಂಗ್ರೆಸ್ ವಂಶಸ್ಥರು ಎಂದರು.

ನನ್ನ ಆರೋಪದ ಬಗ್ಗೆ ತನಿಖೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡ್ತೇನೆ. ನ್ಯಾಯಧೀಶರ ಮೂಲಕ ನನ್ನ ಆರೋಪದ ತನಿಖೆ ಆಗಬೇ ಕೆಂದು ಒತ್ತಾಯಿಸುತ್ತೇನೆ. ನನ್ನ ಆರೋಪದ ಬಗ್ಗೆ ಸಿಐಡಿ ಮೂಲಕ ಸಮಗ್ರ ತನಿಖೆಯಾಗಬೇಕೆಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next