Advertisement

ಹುಣಸೂರು: ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ

12:36 PM Mar 20, 2023 | Team Udayavani |

ಹುಣಸೂರು: ಕಾಂಗ್ರೆಸ್ ಪಕ್ಷ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಮೂಲಕ 2 ಸಾವಿರ ರೂ., 200 ಯುನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಣೆ ಜೊತೆಗೆ ವಸತಿ ನಿರ್ಮಾಣಕ್ಕೆ ನಾಲ್ಕು ಲಕ್ಷ ರೂ. ಅನುದಾನ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿ ಘೋಷಣೆ ಮಾಡಿದೆ ಎಂದು ಶಾಸಕ ಎಚ್.ಪಿ. ಮಂಜುನಾಥ್ ಹೇಳಿದರು.

Advertisement

ಅವರು ನಗರದ ಕಲ್ಕುಣಿಕೆ ಬಡಾವಣೆಯಲ್ಲಿ ಗ್ಯಾರೆಂಟಿ ಕಾರ್ಡ್ ಗಳ ಭಿತ್ತಿ ಪತ್ರಗಳನ್ನು ಆಟೋಗಳಿಗೆ ಅಂಟಿಸುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಕಾರ್ಡ್‌ಗಳನ್ನು ಮನೆ ಮನೆಗೆ ತಲುಪಿಸಿ ಪಕ್ಷದ ಘೋಷಣೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ಸಂಘಟಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಟ್ಟಿದ್ದ 165 ಭರವಸೆಗಳನ್ನು ಈಡೇರಿಸಲಾಗಿತ್ತು ಎಂದರು.

ಆದ್ದರಿಂದ ಈ ಬಾರಿ ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಬಂದಿದೆ. ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಪಕ್ಷದ ಪರವಾದ ಅಲೆಯಿದ್ದು, ಕ್ಷೇತ್ರದ ಜನತೆ ಕಾಂಗ್ರೆಸ್ ಪಕ್ಷ ಸೇರಿದಂತೆ ನನ್ನ ಮೇಲೆ ಅತಿ ಹೆಚ್ಚು ಪ್ರೀತಿ ವಿಶ್ವಾಸ ನಂಬಿಕೆ ಇಟ್ಟಿದ್ದು ಕಾರ್ಯಕರ್ತರು ಪಕ್ಷದ ಘೋಷಣೆಗಳನ್ನು ಜನರಿಗೆ ತಿಳಿಸಬೇಕೆಂದು ಮನವಿ ಮಾಡಿ ವಿರೋಧ ಪಕ್ಷಗಳ ಟೀಕೆ ಹಾಗೂ ಬೆದರಿಕೆಗಳಿಗೆ ಎದೆಗುಂದದೆ ಧೈರ್ಯವಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯಗೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ವೇತಾ ಮಂಜುನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಕಲ್ಕುಣಿಕೆ ರಮೇಶ್, ಕಾರ್ಯಾಧ್ಯಕ್ಷ ವಕೀಲ ಪುಟ್ಟರಾಜ್, ನಗರಸಭಾ ಮಾಜಿ ಅಧ್ಯಕ್ಷರುಗಳಾದ ಸೌರಭ ಸಿದ್ದರಾಜ್, ಪರ್ವೀನ್ ತಾಜ್ ಜಾಕೀರ್ ಹುಸೇನ್ ಮಾಜಿ ಉಪಾಧ್ಯಕ್ಷ ದೇವನಾಯಕ, ನಗರಸಭಾ ಸದಸ್ಯರಾದ ಸ್ವಾಮಿ ಗೌಡ, ಮನು, ಮಂಜು ರಂಜಿತಾ ಹರೀಶ್ ವೆನ್ನಿ ತೋಮಸ್, ರಾಘು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್, ಪದ್ಮನಾಭ, ಮನೋಜ್ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next