Advertisement

ಖರ್ಗೆ ಮತ್ತು ಕುಟುಂಬದ ಹತ್ಯೆಗೆ ಬಿಜೆಪಿ ಅಭ್ಯರ್ಥಿ ಸಂಚು: ಕಾಂಗ್ರೆಸ್ ಗಂಭೀರ ಆರೋಪ

10:51 AM May 06, 2023 | Team Udayavani |

ಬೆಂಗಳೂರು: ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿಯ ಸೋಲಿನ ಹತಾಶೆ ಅಪಾಯದ ಹಂತ ತಲುಪಿದ್ದು, ರಾಜ್ಯದ ದಲಿತ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಹತ್ಯೆಗೈಯ್ಯಲು ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.

Advertisement

ಈಚೆಗೆ ರಾಜಸ್ತಾನದ ಶಾಸಕ ಮದನ್ ದಿಲಾವರ್, ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸಿದ್ದರು. ಈಗ ಅದೇ ಬಿಜೆಪಿಯ ಚಿತ್ತಾಪುರ ಅಭ್ಯರ್ಥಿ ಮಣಿಕಂಠ ರಾಠೋಡ್, ಖರ್ಗೆ ಮತ್ತು ಅವರ ಇಡೀ ಕುಟುಂಬ ಹತ್ಯೆಗೆ ಸಂಚು ರೂಪಿಸಿರುವುದು ಬಹಿರಂಗಗೊಂಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಇದು ಕೇವಲ ಖರ್ಗೆ ಅವರ ಮೇಲೆ ನಡೆಸುವ ಹಲ್ಲೆ ಅಲ್ಲ; ಇಡೀ ಕನ್ನಡಿಗರ ಸ್ವಾಭಿಮಾನ ಮತ್ತು ಅಸ್ಮಿತೆಯ ಕೊಲೆ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಖರ್ಗೆ ಮತ್ತು ಅವರ ಕುಟುಂಬ ಹತ್ಯೆ ಮಾಡಿರುವುದಾಗಿ ಹೇಳಿದ 50 ಸೆಕೆಂಡ್ ಗಳ ಆಡಿಯೋವನ್ನು ಇದೇ ವೇಳೆ ಅವರು ಬಹಿರಂಗಗೊಳಿಸಿದರು. ಅದರಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು, ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರೊಂದಿಗೆ ನಡೆಸಿದ ಸಂಭಾಷಣೆ ಎಂದು ಸುರ್ಜೇವಾಲ ಹೇಳಿದರು.

ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಲಾಗುವುದು ಎಂದೂ ಅವರು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next