Advertisement

ಕಾಂಗ್ರೆಸ್‌ಗೆ ಎನ್‌ಸಿಪಿ ಬೆಂಬಲ

11:58 AM Apr 18, 2018 | Team Udayavani |

ಬೆಂಗಳೂರು: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಪ್ರಸಕ್ತ ವಿಧಾನ ಸಭಾ ಚುನಾವಣೆಯಲ್ಲಿ ಶರದ್‌ ಪವಾರ್‌ ಅವರ ಎನ್‌ಸಿಪಿ ಕಾಂಗ್ರೆಸ್‌ ಬೆಂಬಲಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ತ್ರಿಪಾಠಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಪಾಯ. ಈ ಹಿನ್ನೆಲೆಯಲ್ಲಿ ಎನ್‌ಸಿಪಿ ಪಕ್ಷ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

Advertisement

ಸಿದ್ದರಾಮಯ್ಯ ಅವರು ಅನ್ನ ಭಾಗ್ಯ, ಕ್ಷೀರ ಭಾಗ್ಯ ಸೇರಿ ಜನಪರ ಯೋಜನೆಗಳನ್ನು ಜಾರಿಗೆ ತಂದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಮತ್ತು ರಾಮಕೃಷ್ಣ  ಹೆಗಡೆ ನಂತರ ಕರ್ನಾಟಕ ಕಂಡ ಅತ್ಯುತ್ತಮ ಮುಖ್ಯಮಂತ್ರಿ ಎಂದು ಬಣ್ಣಿಸಿದರು. ಪ್ರಸಕ್ತ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಎನ್‌ಸಿಪಿ, ಜೆಡಿಎಸ್‌ಗೆ ಬೆಂಬಲಿಸುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next