Advertisement

ಸೋಲಿನ ಭಯದಿಂದ ಕಾಂಗ್ರೆಸ್ ಬಿಜೆಪಿಯ ಮೇಲೆ ಪೋನ್ ಕದ್ದಾಲಿಕೆ ಆರೋಪ ಮಾಡಿದೆ: ಪ್ರಮೋದ ಸಾವಂತ್

12:07 PM Mar 07, 2022 | Team Udayavani |

ಪಣಜಿ: ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ತನ್ನ ಸೋಲನ್ನು ಒಪ್ಪಿಕೊಂಡಿದೆ. ಇದರಿಂದಾಗಿ ಕಾಂಗ್ರೆಸ್ ನಾಯಕರು ಬಿಜೆಪಿಯ ಮೇಲೆ ಪೋನ್ ಕದ್ದಾಲಿಕೆ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ  ಪೋನ್ ಕದ್ದಾಲಿಕೆ ಶಂಕೆಯಿದ್ದರೆ ಅವರು ಪೋಲಿಸ್ ಮಹಾನಿರ್ದೇಶಕರಿಗೆ ದೂರು ನೀಡಬೇಕು. ಆಧಾರ ರಹಿತ ಆರೋಪ ಮಾಡುವುದು ಸರಿಯಲ್ಲ. ಚುನಾವಣೆಯಲ್ಲಿ ಸೋಲಿನ ಭಯದಿಂದ ಕಾಂಗ್ರೆಸ್ ಪಕ್ಷವು ಬಿಜೆಪಿಯ ಮೇಲೆ ಆರೋಪ ಮಾಡಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಆರೋಪಿಸಿದರು.

ಕಾಂಗ್ರೇಸ್ ಪಕ್ಷವು ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಕಾಂಗ್ರೇಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್ ಉಪಸ್ಥಿತಿಯಲ್ಲಿ ಪಣಜಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಬಿಜೆಪಿಯು ಎಲ್ಲ ಪಕ್ಷಗಳಿಗೂ ದ್ರೋಹ ಬಗೆದಿರುವುದರಿಂದ ಬಿಜೆಪಿಗೆ ಯಾರೂ ಬೆಂಬಲ ನೀಡುವುದಿಲ್ಲ. ಬಿಜೆಪಿಯು ಕಾಂಗ್ರೇಸ್ಸಿಗರ ಪೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next