Advertisement

ಫೆಬ್ರವರಿ ಕೊನೆಯ ವಾರದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ: ಸಿದ್ದರಾಮಯ್ಯ

04:26 PM Feb 11, 2023 | Team Udayavani |

ವಿಜಯಪುರ: ಫೆಬ್ರವರಿ ಕೊನೆಯ ವಾರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಶನಿವಾರ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನಡೆಸಿರುವ ಮೂರು ಸಮೀಕ್ಷೆ ಆಧಾರದಲ್ಲಿ ಗೆಲ್ಲುವ ಶಕ್ತಿ ಇರುವವರಿಗೆ ಟಿಕೆಟ್ ನೀಡಲಾಗುತ್ತದೆ ಎಂದರು.

150 ಕ್ಷೇತ್ರಗಳಲ್ಲಿ ವಿಜಯ ಸಾಧಿಸುವ ಗುರಿಯೊಂದಿಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲಾಗುತ್ತದೆ. ಗೆಲ್ಲುವ ಅರ್ಹತೆ ಇರುವ ಹಳೆಯ ನಾಯಕರ ಜೊತೆ ಹೊಸಬರಿಗೂ ಅವಕಾಶ ಕಲ್ಪಿಸಲಾಗುತ್ತದೆ. ಗೆಲ್ಲುವ ಅವಕಾಶ ಇರುವ ಕ್ಷೇತ್ರಗಳಲ್ಲಿ ಅರ್ಹರಿಗೆ ಟಿಕೆಟ್ ನೀಡಲಾಗುತ್ತದೆ. ಹೀಗಾಗಿ ಅಲ್ಪ‌ಸಂಖ್ಯಾತರಿಗೆ ಕೊಡಬೇಕು, ಹಿಂದುಳಿದವರಿಗೆ ಕೊಡಬೇಕು ಎನ್ನುವುದೇನಿಲ್ಲ. ಗೆಲ್ಲುವ ಅವಕಾಶ ಇರುವ ಕಡೆಗಳಲ್ಲಿ ಎಲ್ಲ ಸಮುದಾಯಕ್ಕೂ ಆದ್ಯತೆ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ:ಪಂಚಮುಖಿ ಆಂಜನೇಯ ಕ್ಷೇತ್ರಕ್ಕೆ ಭೇಟಿ ನೀಡಿದ ಅಮಿತ್ ಶಾ

ಪರಿಶಿಷ್ಟ ಜಾತಿ ಪಂಗಡಗಳ ಸಮುದಾಯಕ್ಕೆ 51 ಕ್ಷೇತ್ರಗಳು ಮೀಸಲಿವೆ. ಅಲ್ಲಿಯೂ ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳನ್ನು ಕಣಕ್ಕಿಸಲಾಗುತ್ತದೆ ಎಂದರು.

Advertisement

ಯವಕರು, ಅನುಭವಿ ಹಿರಿಯರಿಗೂ ಟಿಕೆಟ್ ನೀಡಲಾಗುತ್ತದೆ. 150 ಸ್ಥಾನ ಗೆಲ್ಲುವುದು ನಮ್ಮ ಮುಂದಿರುವ ಗುರಿ. ಹೀಗಾಗಿ ಗೆಲುವಿಗೆ ನಮ್ಮ ಆದ್ಯತೆ ನೀಡಿ ಟಿಕೆಟ್ ಹಂಚಿಕೆ ಮಾಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next