Advertisement
ನಂಜನಗೂಡು ಕಾಂಗ್ರೆಸ್ ಶಾಸಕರಾಗಿದ್ದ ವಿ.ಶ್ರೀನಿವಾಸ ಪ್ರಸಾದ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಅಲ್ಲದೆ, ಸಕ್ಕರೆ ಸಚಿವರಾಗಿದ್ದ ಗುಂಡ್ಲುಪೇಟೆ ಶಾಸಕ ಎಚ್. ಎಸ್.ಮಹದೇವಪ್ರಸಾದ್ ಅವರ ಅಕಾಲಿಕನಿಧನದಿಂದಾಗಿ ಆ ಭಾಗದಲ್ಲಿ ಕಾಂಗ್ರೆಸ್ಗೆ ಸ್ವಲ್ಪ ಹಿನ್ನಡೆಯಾಗಿದೆ. ಇದನ್ನು ನಿಭಾಯಿಸುವುದರ ಜತೆಗೆ ಮಹದೇವಪ್ರಸಾದ್ ಅವರ ನಿಧನದಿಂದ ಉಂಟಾಗಿರುವ ಲಿಂಗಾಯತ ನಾಯಕರ ಕೊರತೆ ನೀಗಿಸಲು ಸೋಮಣ್ಣ
ಅವರಿಗೆ ಮಣೆ ಹಾಕಲು ಸಿದ್ದರಾಮಯ್ಯ ಮುಂದಾಗಿದ್ದು, ಸ್ವತಃ ಮಾತುಕತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಹೊರ ಬರಲು ಸಾಧ್ಯವಾಗುತ್ತದೆ ಎಂಬುದು ಸಿದ್ದರಾಮಯ್ಯ ಯೋಚನೆ ಎನ್ನಲಾಗಿದೆ.
Related Articles
ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದ ಬಳಿಕ ಆ ಸಂಬಂಧ ಹಳಸಿತ್ತು. ಯಡಿಯೂರಪ್ಪ ಮತ್ತೆ ಬಿಜೆಪಿಗೆ ಬಂದು ರಾಜ್ಯಾಧ್ಯಕ್ಷರಾದರೂ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದೆ ಸೋಮಣ್ಣ ಬೇಸರಗೊಂಡಿದ್ದಾರೆ. ಹೀಗಾಗಿ, ಸೋಮಣ್ಣ
ಅವರನ್ನು ಕಾಂಗ್ರೆಸ್ಗೆ ಕರೆತರುವ ಮೂಲಕ ಯಡಿಯೂರಪ್ಪಗೆ ಶಾಕ್ ನೀಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
Advertisement
ಅಂತ್ಯ ಸಂಸ್ಕಾರದ ದಿನವೇ ಮಾತುಕತೆ:ಮಹದೇವ್ ಪ್ರಸಾದ್ ಅವರ ಅಂತ್ಯಸಂಸ್ಕಾರದ ದಿನವೇ ಸಿದ್ದರಾಮಯ್ಯ ಮೈಸೂರಿನಲ್ಲಿ ವಿ.ಸೋಮಣ್ಣ ಜತೆ ಮಾತುಕತೆ ನಡೆಸಿದ್ದಾರೆ. ಖಾಲಿ ಇರುವ ಮಂತ್ರಿ ಸ್ಥಾನ ನೀಡುವ ಭರವಸೆಯನ್ನೂ ನೀಡಿದ್ದಾರೆ. ಇದಕ್ಕೆ ಸೋಮಣ್ಣ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರಾದರೂ ಸ್ಪಷ್ಟ ತೀರ್ಮಾನ ತಿಳಿಸಿಲ್ಲ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ. ಒಂದು ವೇಳೆ ಕಾಂಗ್ರೆಸ್ ಸೇರಿದರೆ ಬಿಜೆಪಿಯಿಂದ ಎಂಎಲ್ಸಿ ಆಗಿರುವ ಸೋಮಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಮತ್ತೆ ಎಂಎಲ್ಸಿ ಆಗಬೇಕಾಗುತ್ತದೆ. ಮುಖ್ಯಮಂತ್ರಿ ಅಂದುಕೊಂಡಂತೆ ಎಲ್ಲವೂ ನಡೆದರೆ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಗೂ
ಮೊದಲೇ ಸೋಮಣ್ಣ ಅವರನ್ನು ಮಂತ್ರಿ ಮಾಡುವ ಸಾಧ್ಯತೆ ಇದೆ. ಆ ಮೂಲಕ ಈ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ಸಿಎಂ ಕಾರ್ಯತಂತ್ರ ರೂಪಿಸಿದ್ದಾರೆ.
**
ಪ್ರಸಾದ್ ಸೆಳೆದ ಬಿಜೆಪಿಗೆ ತಿರುಗೇಟು?
ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ತನ್ನತ್ತ ಸೆಳೆದುಕೊಂಡು ಕಾಂಗ್ರೆಸ್ಗೆ ಏಟು ನೀಡಿದ್ದ ಬಿಜೆಪಿಗೆ ಸೋಮಣ್ಣ ಅವರ ಮೂಲಕ ದೊಡ್ಡಮಟ್ಟದ ತಿರುಗೇಟು ನೀಡುವುದು ಕೂಡ ಮುಖ್ಯಮಂತ್ರಿಗಳ ಉದ್ದೇಶವಾಗಿದೆ. ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಪ್ರಮುಖವಾಗಿ ಲಿಂಗಾಯತ ಸಮುದಾಯವೇ ನಿರ್ಣಾಯಕ ಪಾತ್ರ ವಹಿಸುವುದರಿಂದ ಆ ಸಮುದಾಯದ ಮತ ಸೆಳೆಯಲು ಹಾಗೂ ಬಿಜೆಪಿಗೆ ಸೆಡ್ಡು ಹೊಡೆಯಲು ಸೋಮಣ್ಣ ಅವರಿಗೆ ಗಾಳ ಹಾಕಿದ್ದಾರೆ ಎಂದು ಹೇಳಲಾಗಿದೆ. *ಶಂಕರ ಪಾಗೋಜಿ