Advertisement

ಕಾಂಗ್ರೆಸ್‌ ತೊರೆಯಲಾರೆ: ಅಂಬರೀಶ್‌

11:01 AM Apr 15, 2017 | |

ಮಂಡ್ಯ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುತ್ತೇನೆ ಎಂಬುದು ಕೇವಲ ವದಂತಿ ಎಂದು ಶಾಸಕ ಅಂಬರೀಶ್‌ ಸ್ಪಷ್ಪಪಡಿಸಿದ್ದಾರೆ.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಜೆಪಿ ಸೇರುವಂತೆ ಆ ಪಕ್ಷದ ನಾಯಕರು ನನ್ನನ್ನು ಭೇಟಿ ಮಾಡಿರುವುದು ನಿಜ. ಆದರೆ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ತೊರೆಯುವುದಿಲ್ಲ. ಕಾಂಗ್ರೆಸ್‌ ನನಗೆ ಎಲ್ಲವನ್ನೂ ಕೊಟ್ಟಿದೆ. 

Advertisement

ಕೇಂದ್ರ ಸಚಿವ ಹಾಗೂ ರಾಜ್ಯದ ವಸತಿ ಸಚಿವ ಸ್ಥಾನವನ್ನು ನೀಡುವ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ ನನ್ನನ್ನು ಬೆಳೆಸಿದೆ. ಸಚಿವ ಸ್ಥಾನ ಹೋದ ಮಾತ್ರಕ್ಕೆ ನಾನು ಪಕ್ಷ ಬಿಡುತ್ತೇನೆ ಎಂದು ಹೇಳುವುದು ಯಾವ ನ್ಯಾಯ? ನನಗೆ ಆರೋಗ್ಯ ಸರಿಯಿಲ್ಲದ ಕಾರಣ ನಾನು ಮಂಡ್ಯ ಕಡೆ ಬರಲಾಗುತ್ತಿಲ್ಲ. ಇದೇ ಕಾರಣಕ್ಕಾಗಿ ಉಪ ಚುನಾವಣೆ ಪ್ರಚಾರದಲ್ಲೂ ಪಾಲ್ಗೊಳ್ಳಲಾಗಲಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next