Advertisement

ತಕ್ಷಣ ನೀತಿ ಸಂಹಿತೆ ಜಾರಿಗೆ ಆಯೋಗಕ್ಕೆ ಕಾಂಗ್ರೆಸ್‌ ಮನವಿ

11:48 PM Sep 30, 2019 | Team Udayavani |

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಚುನಾವಣೆ ಘೊಷಣೆ ಮಾಡಿ, ನವೆಂಬರ್‌ 11 ರಿಂದ ನೀತಿ ಸಂಹಿತೆ ಜಾರಿಗೊಳಿಸಲು ಮುಂದಾಗಿದ್ದು, ಇದರಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಅನುಕೂಲ ಮಾಡಿಕೊಡುವ ಹುನ್ನಾರ ಅಡಗಿದ್ದು, ತಕ್ಷಣ ನೀತಿ ಸಂಹಿತೆ ಜಾರಿಗೊಳಿಸಬೇಕೆಂದು ರಾಜ್ಯ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

Advertisement

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇತೃತ್ವ ದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಂತರ ಮಾಧ್ಯಮ ಗಳೊಂದಿಗೆ ಮಾತನಾಡಿದ ದಿನೇಶ್‌ ಗುಂಡೂರಾವ್‌, ದೇಶದ ಇತಿಹಾಸದಲ್ಲಿ ಆಯೋಗ ಈ ರೀತಿ ನಡೆದುಕೊಂಡಿರಲಿಲ್ಲ.

ಚುನಾವಣಾ ಆಯೋಗ ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಕಕ್ಷಿದಾರರಲ್ಲದಿದ್ದರೂ, ಸ್ವಯಂ ಪ್ರೇರಿತರಾಗಿ ಹೇಳಿಕೆ ನೀಡಿ ಅನರ್ಹರ ಪರ ವಕಾಲತ್ತು ವಹಿಸುತ್ತಾರೆ. ಚುನಾವಣೆ ಮುಂದೂಡಲು ಅವಕಾಶವಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡುವುದಾಗಿ ಹೇಳಿದ್ದ ಆಯೋಗ ಮತ್ತೆ ಚುನಾವಣೆ ಮುಂದೂಡಲು ತೀರ್ಮಾನಿ ಸಿರುವುದಾಗಿ ಕೋರ್ಟ್‌ ಮುಂದೆ ಹೇಳಿ, ಒಂದೇ ದಿನದಲ್ಲಿ ಮತ್ತೆ ಚುನಾವಣೆ ಘೋಷಣೆ ಮಾಡಿದರು. ಆಯೋಗದ ಈ ನಡೆಯ ಹಿಂದೆ ಯಾರಿದ್ದಾರೆ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next