Advertisement

ತಿ.ನರಸೀಪುರದಲ್ಲಿ ಕಾಂಗ್ರೆಸ್‌ ವಿಜಯೋತ್ಸವ

02:10 PM May 16, 2018 | Team Udayavani |

ತಿ.ನರಸೀಪುರ: ಬಾದಾಮಿಯಲ್ಲಿ ಸಿದ್ದರಾಮಯ್ಯ ಹಾಗೂ ವರುಣಾ  ಕ್ಷೇತ್ರದಲ್ಲಿ ಡಾ.ಯತೀಂದ್ರ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಂಗಳವಾರ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ಪಟಾಕಿ ಸಿಡಿಸಿಮ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

Advertisement

ಸಾರ್ವತ್ರಿಕ ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಲ್ಲಿ ಜಮಾವಣೆಗೊಂಡ ವರುಣಾ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.

ಕಾಂಗ್ರೆಸ್‌ ಮುಖಂಡ ನಂಜುಂಡಸ್ವಾಮಿ ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಾದೇಶವನ್ನು ಎಲ್ಲರೂ ಸ್ವಾಗತಿಸಬೇಕು. ಬಿಜೆಪಿ ಮತ್ತು ಜೆಡಿಎಸ್‌ ಅಬ್ಬರದ ನಡುವೆ ಬಾದಾಮಿ ಜನರು ಸಿದ್ದರಾಮಯ್ಯ ಕೈ ಹಿಡಿದಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಮಾಧ್ಯಮ ಸಂಚಾಲಕ ಸಂತೃಪ್ತಿಕುಮಾರ್‌ ಮಾತನಾಡಿ, ವರುಣಾ ಜನರ ಕಣ್ಮಣಿಯಾಗಿರುವ ಯತೀಂದ್ರ ರಾಜಕೀಯವಾಗಿ ಬೆಳೆಯಲು ಕ್ಷೇತ್ರದ ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ನಿರ್ಗಮಿತ ಸಿದ್ದರಾಮಯ್ಯ ಸ್ಥಾನವನ್ನು ತುಂಬುವ ನಾಯಕರಾಗಿ ಬೆಳೆಯಲಿದ್ದಾರೆ ಎಂದರು.

ಪುರಸಭೆ ಸದಸ್ಯ ಟಿ.ಜಿ.ಪುಟ್ಟಸ್ವಾಮಿ, ಕನ್ನಡ ಪುಟ್ಟಸ್ವಾಮಿ, ಜಿಲ್ಲಾ ಕಾಂಗ್ರೆಸ್‌ ಸಹ ಮಾಧ್ಯಮ ಸಂಚಾಲಕ ಫೈನಾನ್ಸ್‌ ಕಾಂತರಾಜು, ಗ್ರಾಪಂ ಮಾಜಿ ಉಪಾಧ್ಯಕ್ಷ ತಿರುಮಕೂಡಲು ಪುಟ್ಟು, ಮಾಜಿ ಸದಸ್ಯರಾದ ಹೇಮಂತ್‌ಕುಮಾರ್‌, ರಂಗಸ್ವಾಮಿ, ಕೆಪಿಸಿಸಿ ಅಲ್ಪಸಂಖ್ಯಾತ ಸಂಚಾಲಕ ಬಿ.ಮನ್ಸೂರ್‌ ಆಲಿ ಇನ್ನಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next