Advertisement

‘ಕಾಂಗ್ರೆಸ್ ವಿಷನ್ 2023’ ವೆಬ್ ಸೈಟ್ ಅನಾವರಣ

03:21 PM Dec 29, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ‘ಕಾಂಗ್ರೆಸ್ ವಿಷನ್ 2023’ ವೆಬ್ ಸೈಟ್ ಅನ್ನು ಗುರುವಾರ ಅನಾವರಣ ಮಾಡಲಾಯಿತು.

Advertisement

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಪ್ರಚಾರ ಸಮಿತಿಯ ಉಪಾಧ್ಯಕ್ಷ ಪ್ರೋ. ರಾಧಾಕೃಷ್ಣ, ಮಧು ಬಂಗಾರಪ್ಪ, ಸಮಿತಿಯ ಸದಸ್ಯ ಹುಸೇನ್ ಹಾಗೂ ರಾಜು ಗೌಡ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರ ಅವರು ‘ನಾವು ಆಡಳಿತಕ್ಕೆ ಬಂದರೆ ಜನರಿಗೆ ಏನು ಕೊಡುತ್ತೇವೆ ಎಂಬ ಭರವಸೆಗಳನ್ನು ತಿಳಿಸುವುದು ಬಹಳ ಮುಖ್ಯ. ಆ ದೃಷ್ಟಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಚುನಾವಣೆಗೆ ಹೋಗುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ತಿಳಿಸುತ್ತದೆ. ನಾವು ಕೊಟ್ಟ ಭರವಸೆಗಳು ಈಡೇರಿಸುವ ಭರವಸೆಗಳು. ನಾವು ಕೊಡುವ ಭರವಸೆ ಸಂಪೂರ್ಣವಾಗಿ ಕಾರ್ಯಗತಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ವಿಭಿನ್ನವಾಗಿ ನಡೆದುಕೊಳ್ಳುತ್ತದೆ ಎಂದರು.

2013ರಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುವ ಮುನ್ನ ರಾಜ್ಯದ ಜನತೆಗೆ 160 ಭರವಸೆಗಳನ್ನು ನೀಡಿದ್ದೆವು. ಆ ಭರವಸೆಗಳನ್ನು 2-3 ಹಂತದ ಭರವಸೆಗಳಾಗಿದ್ದೆವು. ಇದರಲ್ಲಿ ಕೆಲವು ಭರವಸೆಗಳು ಅಧಿಕಾರಕ್ಕೆ ಬಂದ ಮೊದಲ ವರ್ಷಗಳಲ್ಲಿ ಈಡೇರಿಸುವಂತಹ ಭರವಸೆಗಳು, ಅನ್ನಭಾಗ್ಯ ಯೋಜನೆ ಅವುಗಳಲ್ಲಿ ಒಂದು. ಇನ್ನು ದೀರ್ಘಾವಧಿ ಭರವಸೆಗಳಾದ ಕೈಗಾರಿಕೆ ಅಭಿವೃದ್ಧಿ, ವಿವಿಧ ಕ್ಷೇತ್ರಗಳ ಭರವಸೆಗಳಾಗಿದ್ದೆವು. ನಾವು ಈ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿ, ನುಡಿದಂತೆ ನಡೆದಿದ್ದೆವು.  ಈ ಪ್ರಣಾಳಿಕೆ ಎಂಬುದು ಕಾಂಗ್ರೆಸ್ ಪಾಲಿಗೆ ಬಹಳ ಪ್ರಮುಖವಾದುದು. ಈ ಪ್ರಣಾಳಿಕೆ ತಯಾರು ಮಾಡುವ ಸಮಿತಿಗೆ ನನ್ನನ್ನು ಅಧ್ಯಕ್ಷರಾನ್ನಾಗಿ ಮಾಡಿದ್ದು, ಪ್ರೋ. ರಾಧಾಕೃಷ್ಣ ಅವರು ಇದ್ದಾರೆ. ಯುವಕರ ಆಶೋತ್ತರಗಳು ಪ್ರಣಾಳಿಕೆಯಲ್ಲಿ ಇರಬೇಕು ಎಂದು ಮಧುಬಂಗಾರಪ್ಪ ಅವರನ್ನು ಸಮಿತಿಯಲ್ಲಿ ಅವಕಾಶ ನೀಡಿದ್ದಾರೆ. ಈಗ ನಾವು ಕಾಂಗ್ರೆಸ್ ವಿಷನ್ 2023 ವೆಬ್ ಸೈಟ್ ಅನಾವರಣ ಮಾಡಿದ್ದು, ಸ್ವಲ್ಪ ವಿಭಿನ್ನವಾಗಿ ಇರಬೇಕು ಎಂಬ ಉದ್ದೇಶದಿಂದ ಜನಸಮುದಾಯದ ಭಾವನೆ, ಸಮಸ್ಯೆಗಳನ್ನು ಅವರಿಂದಲೇ ತಿಳಿದುಕೊಂಡು ಅವುಗಳಿಗೆ ಪರಿಣಾಮಕಾರಿ ಪರಿಹಾರ ನೀಡುವ ಕಾರ್ಯಕ್ರಮ ರೂಪಿಸಲು ಅವಕಾಶ ಕಲ್ಪಿಸಲಾಗಿದೆ. ಜನರನ್ನು ಬೇರೆ ಬೇರೆ ರೀತಿಯಲ್ಲಿ ಸಂಪರ್ಕಿಸಲು ನಾವು ಉದ್ದೇಶಿಸಿದ್ದು, ಅದರಲ್ಲಿ ಈ ವೆಬ್ ಸೈಟ್ ಕೂಡ ಒಂದಾಗಿದೆ. ಈ ವೆಬ್ ಸೈಟ್ ನಲ್ಲಿ ಯಾರು ಬೇಕಾದರೂ ತಮ್ಮ ಸಲಹೆ ಸೂಚನೆ ನೀಡಬಹುದು. ಇನ್ನು ನಮಗೆ ಪತ್ರ ಬರೆಯಬಹುದು ಎಂದರು.

ಇದನ್ನೂ ಓದಿ:‘ಪಠಾಣ್’ಗೆ ಸೆನ್ಸಾರ್ ಸಂಕಷ್ಟ: ಚಿತ್ರ ಮತ್ತು ಹಾಡಿನಲ್ಲಿ ಬದಲಾವಣೆ ಮಾಡಲು ಸೂಚನೆ

Advertisement

ಈ ಬಾರಿ ನಾವು 5 ಪ್ರಮುಖ ವಿಚಾರಗಳ ಬಗ್ಗೆ ಗಮನಹರಿಸಬೇಕು ಎಂದು ಸಲಹೆಗಳು ಬಂದಿವೆ. ಯುವಕರ ಸಮಸ್ಯೆಗಳು, ಮಹಿಳೆಯರ ಸಮಸ್ಯೆ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದೇವೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘಗಳ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತೇವೆ. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿನ ಸಮಸ್ಯೆ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ. ಇನ್ನು ಕೃಷಿ ಕ್ಷೇತ್ರಕ್ಕೆ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ರೈತನ ಸಮಸ್ಯೆಯಿಂದ ಮಾರಾಟದ ಹಂತದವರೆಗೂ ಅನೇಕ ಸಮಸ್ಯೆಗಳಿವೆ. ಇವುಗಳನ್ನು ಬಗೆಹರಿಸುವುದು ಬಹಳ ಮುಖ್ಯ. ಗ್ರಾಮೀಣ ಮೂಲಸೌಕರ್ಯ ಪ್ರಮುಖ ಆದ್ಯತೆ ಆಗಿವೆ. ಇನ್ನು ಬಹಳ ಪ್ರಮುಖವಾಗಿ ಬೆಂಗಳೂರು ನಗರಕ್ಕೆ ಬೇಕಾಗಿರುವ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಮೂಲಸೌಕರ್ಯ, ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದೇವೆ. ಹೀಗಾಗಿ ಬೆಂಗೂರಿಗೆ ಪ್ರತ್ಯೇಕ ಪ್ರಣಾಳಿಕೆ ಭಾಗ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next