Advertisement

ಗೆಲುವಿಗೆ “ಕೈ’ಯಾವುದೇ ಹಂತಕ್ಕೂ ಇಳಿದೀತು: ದೇವೇಗೌಡ

06:10 AM Mar 22, 2018 | |

ನವದೆಹಲಿ: ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್‌ ಯಾವುದೇ ಹಂತಕ್ಕೂ ಹೋದೀತು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಟೀಕಿಸಿದ್ದಾರೆ. 

Advertisement

ನವದೆಹಲಿಯಲ್ಲಿ ಬುಧವಾರ ಮಾತನಾಡಿದ ಅವರು, ವೀರಶೈವ-ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಎಂದು ಕರ್ನಾಟಕ ಸರ್ಕಾರ ಶಿಫಾರಸು ಮಾಡಿರುವುದು ಯಾವ ರೀತಿಯಾಗಿ ಪರಿಣಾಮ ಬೀರಲಿದೆ ಎಂದು ಹೇಳುವುದು ಕಷ್ಟ. ಇದೇ ಬೇಡಿಕೆ ಬಗ್ಗೆ ಕಾಂಗ್ರೆಸ್‌ನ ಹಿಂದಿನ ಸರ್ಕಾರ ಸ್ಪಂದಿಸಿರಲಿಲ್ಲ. ಇದೀಗ ಒಪ್ಪಿಕೊಂಡಿದ್ದಾರೆ. ಹೀಗಾಗಿ ಚುನಾವಣೆ ಗೆಲ್ಲಲು ಅವರು ಯಾವುದೇ ಹಂತಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದರು.

ಕರ್ನಾಟಕ ವಿಧಾನಸಭೆಗೆ ಶೀಘ್ರವೇ ನಡೆಯಲಿರುವ  ಚುನಾವಣೆಯಲ್ಲಿ ಬಿಎಸ್‌ಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎರಡೂ ಪಕ್ಷಗಳಿಗೂ ಅದರಿಂದ ಲಾಭವಾಗಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಸಲ್ಲಿಸಿರುವ ಅವಿಶ್ವಾಸ ಗೊತ್ತುವಳಿಗೆ ಸಂಬಂಧಿಸಿದಂತೆ, ಚರ್ಚೆಗೆ ಬಂದಾಗ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next