Advertisement

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

01:14 AM Sep 28, 2024 | Team Udayavani |

ಬೆಂಗಳೂರು: ಪಕ್ಷದ ನಿಲುವಿಗೆ ವಿರುದ್ಧವಾಗಿ ಬಹಿರಂಗ ಹೇಳಿಕೆಗಳನ್ನು ನೀಡಿದರೆ ಪಕ್ಷ ಅದನ್ನು ಸಹಿಸುವುದಿಲ್ಲ, ಪಕ್ಷದ ಶಿಸ್ತನ್ನು ಪ್ರತಿಯೊಬ್ಬರೂ ಪಾಲಿ ಸ ಬೇಕು, ಪಕ್ಷಕ್ಕಿಂತ ಯಾರೊಬ್ಬರು ದೊಡ್ಡವರಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್‌ ಹೇಳಿದ್ದಾರೆ.

Advertisement

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಅವರು ಸಿಎಂ ರಾಜೀನಾಮೆಗೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಜಿ.ಸಿ. ಚಂದ್ರಶೇಖರ್‌ ಅವರು ಪತ್ರಿಕಾ ಹೇಳಿಕೆ ಮೂಲಕ ಈ ಬಗೆಯ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸದಾ ಆಂತರಿಕ ಪ್ರಜಾಪ್ರಭುತ್ವಕ್ಕೆ ಆದ್ಯತೆ ನೀಡಿದೆ. ಯಾರಾದರೂ ಪಕ್ಷದ ನಿಲುವಿಗೆ ಭಿನ್ನವಾದ ಅಭಿಪ್ರಾಯ ವ್ಯಕ್ತಪಡಿಸಬೇಕಾದಲ್ಲಿ, ಪಕ್ಷದ ವೇದಿಕೆಯೊಳಗೆ ಮಾತ್ರ ವ್ಯಕ್ತಪಡಿಸಬೇಕು. ಯಾವುದೇ ವಿಚಾರವಾದರೂ ಇಂತಹ ಹೇಳಿಕೆಗಳನ್ನು ಸ್ವೀಕರಿಸಲು ಎಐಸಿಸಿ ಹಾಗೂ ಕೆಪಿಸಿಸಿಯು ಸೂಕ್ತ ವ್ಯವಸ್ಥೆ ಹೊಂದಿದೆ. ಈ ವ್ಯವಸ್ಥೆಯೊಳಗೆ ಮಾತ್ರ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು.

ಮಾಧ್ಯಮಗಳ ಮುಂದೆ ಪಕ್ಷದ ನಿಲುವಿಗೆ ಭಿನ್ನವಾಗಿ ಹೇಳಿಕೆ ನೀಡಿ ಪಕ್ಷದ ನಾಯಕರ ಬಗ್ಗೆ ಮಾತನಾಡಿ ಮುಜುಗರ ತರುವುದನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದಲ್ಲಿ ಕಟ್ಟುನಿಟ್ಟಾಗಿ ಶಿಸ್ತು ಪಾಲಿಸಬೇಕು. ಇಲ್ಲಿ ಪಕ್ಷಕ್ಕಿಂತ ಯಾರೊಬ್ಬರೂ ದೊಡ್ಡವರಿಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next