Advertisement

Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

03:08 PM Mar 12, 2024 | Team Udayavani |

ಗದಗ: ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕಣ್ಣಿಗೆ ಖಾರದ ಪುಡಿ ಎರಚಿ, ಕೊಲೆ ಮಾಡಿ ಮರಕ್ಕೆ ನೇತು ಹಾಕಿ ವಿಕೃತಿ ಮೆರೆದಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ನಡೆದಿದೆ.

Advertisement

ಮೃತನನ್ನು ಡೋಣಿ ಗ್ರಾಮದ ಶರಣಪ್ಪ ಸಂದಿಗೌಡರ ಎಂದು ಗುರುತಿಸಲಾಗಿದೆ. ಶರಣಪ್ಪ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಡೋಣಿ ಗ್ರಾಮದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಪ್ರಮುಖನಾಗಿದ್ದನು. ಕೊಲೆಗೆ ಕಾರಣ ತಿಳಿದುಬಂದಿಲ್ಲ.

ಶರಣಪ್ಪ ಸಂದಿಗೌಡರ ಕೊಲೆಯಾಗುವ ಮುನ್ನ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿರುವ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರೆಚಿ ಕೊಲೆ ಮಾಡಿದ್ದಾರೆ. ನಂತರ ಮರಕ್ಕೆ ಹಗ್ಗದಿಂದ ಎರಡು ಕಾಲು, ಕುತ್ತಿಗೆ ಕಟ್ಟಿ ಹಾಕಿ ವಿಕೃತಿ ಮೆರೆದಿದ್ದಾರೆ.

ಡೋಣಿ ಹಾಗೂ ಡಂಬಳ ಗ್ರಾಮಸ್ಥರು ಕೊಲೆಯ ಸ್ವರೂಪ‌ ನೋಡಿ ಬೆಚ್ಚಿಬಿದ್ದಿದ್ದು, ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಮುಂಡರಗಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next