Advertisement

ಮೋದಿ ಭೇಟಿ: ಏರ್ ಪೋರ್ಟ್ ಮುತ್ತಿಗೆಗೆ ತೆರಳುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನ

11:30 AM Jun 20, 2022 | Team Udayavani |

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ವಿವಿಧ ಯೋಜನೆಗಳ ಉದ್ಘಾಟನೆ/ ಶಿಲಾನ್ಯಾಸ, ಯೋಗ ಕಾರ್ಯಕ್ರಮ ಸೇರಿ ಎರಡು ದಿನಗಳ ಕಾರ್ಯಕ್ರಮಕ್ಕಾಗಿ ಮೋದಿ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮೋದಿ ಆಗಮನದ ವೇಳೆ ಏರ್ ಪೋರ್ಟ್ ಮುತ್ತಿಗೆ ಹಾಕಲು ತೆರಳುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

Advertisement

ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30ಕ್ಕೂ ಹೆಚ್ಚು ಜನರನ್ನು ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ….. ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

‘ಮೋದಿ ಗೋ ಬ್ಯಾಕ್’ ಘೋಷಣೆ ಕೂಗಲು 10ಕ್ಕೂ ಹೆಚ್ಚು ವಾಹನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೊರಟಿದ್ದರು. ಈ ವೇಳೆ ಪ್ರವಾಸಿ ಮಂದಿರದ ಬಾಗಿಲಲ್ಲೇ ಪೊಲೀಸರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next