Advertisement

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಲ್ಲ: ಸಚಿವ ಜಮೀರ್‌

06:41 AM May 02, 2019 | Team Udayavani |

ಹುಬ್ಬಳ್ಳಿ: ಮಂಡ್ಯ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬೇಸರಗೊಂಡು ಮನೆಯಲ್ಲಿ ಕುಳಿತಿದ್ದರೆ ವಿನಃ ಪಕ್ಷ ವಿರೋಧಿ ಕಾರ್ಯ ಮಾಡಿಲ್ಲ. ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಮತ ಹಾಕಿಲ್ಲ. ಸಚಿವ ಜಿ.ಟಿ.ದೇವೇಗೌಡ ಹಾಗೇಕೆ ಹೇಳಿದ್ದಾರೋ ಗೊತ್ತಿಲ್ಲ ಎಂದು ಸಚಿವ ಜಮೀರ್‌ ಅಹ್ಮದ ಖಾನ್‌ ತಿಳಿಸಿದರು.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಬಿಟ್ಟರೆ ಇನ್ನುಳಿದ ಯಾವ ಜಿಲ್ಲೆಗಳಲ್ಲೂ ಸಮಸ್ಯೆ ಇರಲಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬೇಸರಗೊಂಡು ಮನೆಯಲ್ಲಿ ಇದ್ದರೆ ಹೊರತು ಸುಮಲತಾ ಪರವಾಗಿ ಕೆಲಸ ಮಾಡಿಲ್ಲ. ಕಾಂಗ್ರೆಸ್‌ನವರು ಜೆಡಿಎಸ್‌ಗೆ ಮತ ಹಾಕಿಸಿದ್ದಾರೆಯೇ ಹೊರತು ಬಿಜೆಪಿಗೆ ಮತ ಹಾಕಿಲ್ಲ.

ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿಯವರು ಕಾಂಗ್ರೆಸ್‌ ಪಕ್ಷದ ಎಲ್ಲ ಮುಖಂಡರ ವಿಶ್ವಾಸ ತೆಗೆದುಕೊಳ್ಳಬೇಕಿತ್ತು. ಆದರೆ, ಅವರು ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ನಿಖಿಲ್‌ ಕುಮಾರಸ್ವಾಮಿ 3 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಿದ್ದರು. ಈಗಲೂ ನಿಖಿಲ್‌ 1.5 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next