Advertisement

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

12:04 AM Apr 16, 2024 | Team Udayavani |

ತುಮಕೂರು: ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆಯರು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಭಾಷಣ ಮಾಡುವ ವೇಳೆ ವೇದಿಕೆಗೆ ನುಗ್ಗಿದ ಘಟನೆ ಸೋಮವಾರ ಸಂಜೆ ನಡೆದಿದೆ.

Advertisement

ನಗರದ ಕುಂಚಿಟಿಗ ಒಕ್ಕಲಿಗರ ಸಮುದಾಯ ಭವನದಲ್ಲಿ ಬಿಜೆಪಿ -ಜೆಡಿಎಸ್‌ ಮೈತ್ರಿ ಕಾರ್ಯಕರ್ತರ ಸಭೆ ನಡೆಯುತ್ತಿತ್ತು. ದೇವೇಗೌಡರು, ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಸಭೆಯಲ್ಲಿ ಮಾತನಾಡಲು ಆರಂಭಿಸಿದರು. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತೆಯರು ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಘೋಷಣೆ ಕೂಗಿದರು.

ಕಾರ್ಯಕರ್ತೆಯರ ಸೋಗಿನಲ್ಲಿ ಬಂದು ಸಭೆಯಲ್ಲಿ ಕೂತಿದ್ದ ಇಬ್ಬರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರು, ಕುಮಾರಸ್ವಾಮಿಯವರ ಹೇಳಿಕೆಯನ್ನು ಖಂಡಿಸಿದರು. ಕೂಡಲೇ ಅಲ್ಲಿದ್ದ ಬಿಜೆಪಿ ಹಾಗೂ ಜೆಡಿಎಸ್‌ನ ಕಾರ್ಯಕರ್ತೆಯರು ಅವರನ್ನು ಪ್ರತಿಭಟನಕಾರರನ್ನು ಬಲವಂತ ವಾಗಿ ಹೊರಕಳುಹಿಸಿದರು. ಕೂಡಲೇ ಧಾವಿಸಿ ಬಂದ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದರು.

 

Advertisement

Udayavani is now on Telegram. Click here to join our channel and stay updated with the latest news.

Next