Advertisement

Congress ಕಾರ್ಯಕರ್ತರು ಕೋವಿ ಇಟ್ಟುಕೊಂಡು ಓಡಾಡುತ್ತಾರೆ: ಅಶೋಕ್‌

11:40 PM Apr 08, 2024 | Team Udayavani |

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕರ್ತರು ಗನ್‌ ಇಟ್ಟುಕೊಂಡು ಓಡಾಡುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್‌ ವಾಪಸ್‌ ಕೊಡಬೇಕಾಗಿತ್ತು. ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್‌ ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್‌ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂಥವರು ಮುಖ್ಯಮಂತ್ರಿಗಳಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಕಾಂಗ್ರೆಸ್ಸಿನ ಗೂಂಡಾ ರಾಜ್ಯ ಎಂದರು. ಈ ಕುರಿತು ಬಿಜೆಪಿ ಚುನಾವಣ ಆಯೋಗಕ್ಕೆ ದೂರು ನೀಡಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next