Advertisement

ದಿಲ್ಲಿಯಲ್ಲಿ ಕಾಂಗ್ರೆಸ್‌ ವರ್ಕಿಂಗ್‌ ಕಮಿಟಿ ಸಭೆ : ಪಕ್ಷದ ಹೀನಾಯ ಸೋಲಿನ ಬಗ್ಗೆ ಚರ್ಚೆ

09:22 AM May 26, 2019 | Team Udayavani |

ಹೊಸದಿಲ್ಲಿ : ಇಂದಿಲ್ಲಿ ಸಭೆ ಸೇರಿರುವ ಕಾಂಗ್ರೆಸ್‌ ವರ್ಕಿಂಗ್‌ ಕಮಿಟಿಯಲ್ಲಿ ದೇಶಾದ್ಯಂತದ ಉನ್ನತ ಕಾಂಗ್ರೆಸ್‌ ನಾಯಕರು ಭಾಗವಹಿಸಿದ್ದು 2019ರ ಲೋಕಸಭಾ ಚುನಾವಣೆಗಳಲ್ಲಿ ಪಕ್ಷವು ಕಂಡಿರುವ ಹೀನಾಯ ಸೋಲಿನ ಕಾರಣಗಳನ್ನು ಚರ್ಚಿಸಲು ತೊಡಗಿದ್ದಾರೆ.

Advertisement

ಸಿಡಬ್ಲ್ಯುಸಿ ಸಭೆಯ ಅಧ್ಯಕ್ಷತೆಯನ್ನು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ವಹಿಸಿದ್ದಾರೆ. ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಪಕ್ಷದ ಆಡಳಿತೆ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ದೇಶಾದ್ಯಂತದ ಪಕ್ಷದ ಉನ್ನತ ನಾಯಕರು ಪಾಲ್ಗೊಂಡಿದ್ದಾರೆ.

ಇದೇ ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಲೋಕಸಭಾ ಚುನಾವಣೆಯಲ್ಲಿನ ಪಕ್ಷದ ದಯನೀಯ ಸೋಲಿಗೆ ಸಂಪೂರ್ಣ ಹೊಣೆ ಹೊತ್ತು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

2014ರಲ್ಲಿ ಕೇವಲ 44 ಸೀಟುಗಳನ್ನು ಗೆದ್ದಲ್ಲಿಂದ ಈಗ 2019ರಲ್ಲಿ 52 ಸೀಟುಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್‌ ತನ್ನ ನಿರ್ವಹಣೆಯನ್ನು ಸುಧಾರಿಸಿದೆಯಾದರೂ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷಕ್ಕೆ ಖಾತೆಯನ್ನೇ ತೆರೆಯಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next