Advertisement

Congressಗೆ ಸೆಡ್ಡು; ಕಡೂರಲ್ಲಿ ಶಕ್ತಿ ಪ್ರದರ್ಶನ ಮಾಡಿದ ವೈ.ಎಸ್.ವಿ.ದತ್ತ

04:20 PM Apr 09, 2023 | Team Udayavani |

ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಬಳಿಕ ಸ್ವಕ್ಷೇತ್ರ ಕಡೂರಿನಲ್ಲಿ ಭಾನುವಾರ ವೈ.ಎಸ್.ವಿ.ದತ್ತ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಅಭಿಮಾನಿಗಳ ಸ್ವಾಭಿಮಾನದ ಸಭೆ ಕರೆದಿದ್ದ ದತ್ತ, ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬೃಹತ್ ರೋಡ್ ಶೋ ನಡೆಸಿ ಗಮನ ಸೆಳೆದಿದ್ದಾರೆ.

Advertisement

ಕಡೂರಿನ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಗೆ ಜಾಗ ಸಾಲದೆ ಮಂಟಪದ ಕೆಳಭಾಗದಲ್ಲಿ ಎಲ್ ಇಡಿ ವ್ಯವಸ್ಥೆ ಮಾಡಲಾಗಿತ್ತು. ದತ್ತ ಅವರು ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಸಭೆಗೆ ಬಂದರು. ಅಭಿಮಾನಿಗಳನ್ನು ಕಂಡು ನಿಮ್ಮ ಪ್ರೀತಿಗೆ ನಾನು ಋಣಿ ಎಂದರು.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧೆ ಮಾಡುವುದಾಗಿ ಸಭೆಯಲ್ಲಿ ದತ್ತ ಘೋಷಣೆ ಮಾಡಿದರು. ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಹೇಳಿದ ಅವರು ಹೆಗಲ ಮೇಲಿದ್ದ ಟವಲ್ ಒಡ್ಡುತ್ತೇನೆ, ಮತ ಭಿಕ್ಷೆ, ಹಣ ನೀಡಿ, ಭಿಕ್ಷೆ ನೀಡಿ ಎಂದು ಬೇಡಿದರು.

ಈ ವೇಳೆ ಅಭಿಮಾನಿಗಳು 50 ಸಾವಿರ, ಲಕ್ಷ, 2 ಲಕ್ಷ ರೂಪಾಯಿಗಳ ಚೆಕ್ ನೀಡಿ,ಮತ್ತಷ್ಟು ಹಣ ಕೊಡುತ್ತೇವೆ ಎಂದು ಅಭಿಮಾನಿಗಳು ಹೇಳಿದರು.

Advertisement

ಸ್ವಾಭಿಮಾನಿ ಸಭೆಯಲ್ಲಿ 4000ಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ.ಅಭಿಮಾನಿಗಳು ದತ್ತ ಅವರಿಗೆ ಸ್ವತಂತ್ರವಾಗಿ ಸ್ಪರ್ಧಿಸಲು ಮನವಿ ಮಾಡಿದ್ದರು. ದತ್ತ ಅವರು ಎರಡು ದಿನ ಸಮಯ ಕೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next