Advertisement

ಕಾಂಗ್ರೆಸ್‌ನವರು ಪಾರ್ಟ್‌ಟೈಮ್‌ ರಾಜಕಾರಣಿಗಳು: ರಾಮುಲು

07:16 PM Nov 19, 2021 | Team Udayavani |

ಹುಬ್ಬಳ್ಳಿ: ಬಿಜೆಪಿ ಅಭಿವೃದ್ಧಿಪರ ರಾಜಕಾರಣ ಮಾಡಿದರೆ, ಕಾಂಗ್ರೆಸ್‌ನದ್ದು ಹಗರಣಗಳ ರಾಜಕಾರಣವಾಗಿದೆ. ಚುನಾವಣೆಯಲ್ಲಿ ಮಾತ್ರ ಜನರಿಗೆ ಸಿಗುವ ಕಾಂಗ್ರೆಸ್‌ ನಾಯಕರು ನಂತರ ಯಾರಿಗೂ ಸಿಗುವುದಿಲ್ಲ. ಕಾಂಗ್ರೆಸ್‌ ನಾಯಕರು ಪಾರ್ಟ್‌ಟೈಮ್‌ ರಾಜಕಾರಣಿಗಳು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಲೇವಡಿ ಮಾಡಿದರು.

Advertisement

ಜನ ಸ್ವರಾಜ್‌ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ಹೇಳಿಕೆ ನೀಡಲು ಕಾಂಗ್ರೆಸ್‌ ನಾಯಕರಿಗೆ ನಾಚಿಕೆ ಆಗಬೇಕು. ದಲಿತರು, ಮುಸ್ಲಿಮರು ಒಗ್ಗೂಡಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎನ್ನುವ ಕರೆ ಅವರ ಅಸ್ತಿತ್ವ, ಅಭದ್ರತೆಯನ್ನು ತೋರಿಸುತ್ತಿದೆ.

ಇದನ್ನೂ ಓದಿ:40 ಪರ್ಸೆಂಟ್ ಆರೋಪ: ರಾಜ್ಯ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ಎಲ್ಲಾ ಧರ್ಮ, ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಮುನ್ನಡೆಯುತ್ತಿರುವ ಕಾರಣ ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮುಸ್ಲಿಂ, ದಲಿತ ಮಹಾನ್‌ ವ್ಯಕ್ತಿಗಳನ್ನು ರಾಷ್ಟ್ರಪತಿ ಮಾಡಿದ ಕೀರ್ತಿ ಬಿಜೆಪಿಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next