Advertisement

ಉಧಂಪುರ ಸ್ಫೋಟಕ್ಕೆ ಎಲ್‌ಇಟಿ ಉಗ್ರ ನಂಟು ; ಮೂವರ ಬಂಧನ

07:27 PM Jun 04, 2022 | Team Udayavani |

ಶ್ರೀನಗರ : ಉಧಂಪುರದ ಸ್ಲಾಥಿಯಾ ಚೌಕ್‌ನಲ್ಲಿರುವ ನ್ಯಾಯಾಲಯದ ಸಂಕೀರ್ಣದ ಹೊರಗೆ ಮಾರ್ಚ್ 9 ರಂದು ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ 3 ಜನರನ್ನು ಬಂಧಿಸಲಾಗಿದೆ ಎಂದು ಜಮ್ಮು ವಲಯ ಎಡಿಜಿಪಿ ಮುಖೇಶ್ ಸಿಂಗ್ ತಿಳಿಸಿದ್ದಾರೆ.

Advertisement

ಬಂಧಿತರಿಗೆ ಎಲ್‌ಇಟಿ ಭಯೋತ್ಪಾದಕರು ಹಣಕಾಸಿನ ನೆರವು ನೀಡುತ್ತಿದ್ದರು.ಈ ಕುರಿತು ತನಿಖೆ ನಡೆಯುತ್ತಿದೆ. ಬಂಧಿತರ ಬಳಿಯಿದ್ದ ಎರಡು ಐಇಡಿಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಅವರ ಬ್ಯಾಂಕ್ ಖಾತೆಗಳ ವಿಶ್ಲೇಷಣೆ ಮಾಡಲಾಗುತ್ತಿದೆ ಎಂದು ಮುಖೇಶ್ ಸಿಂಗ್ ತಿಳಿಸಿದ್ದಾರೆ.

ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಸ್ಫೋಟ ನಡೆಸಲಾಗಿತ್ತು, ಒಬ್ಬ ವ್ಯಕ್ತಿ ಸಾವನ್ನಪ್ಪಿ, 14 ಮಂದಿ ಗಾಯಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next