Advertisement

ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಏಕರೂಪದ ಪರೀಕ್ಷೆ- ತರಬೇತಿಗೆ ಚಿಂತನೆ: ಡಾ.ಜಿ.ಪರಮೇಶ್ವರ್

05:58 PM Nov 20, 2023 | Team Udayavani |

ಬೆಳಗಾವಿ: ‘ರಾಜ್ಯದಲ್ಲಿ ಪ್ರತಿಯೊಂದು ವಿಭಾಗದಲ್ಲಿ ಪೊಲೀಸ್‌ ಸಿಬ್ಬಂದಿ ನೇಮಕಾತಿಗಾಗಿ ಏಕರೂಪದ ಪರೀಕ್ಷೆ ಹಾಗೂ ತರಬೇತಿ ವ್ಯವಸ್ಥೆ ಅಳವಡಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು.

Advertisement

ನಗರದಲ್ಲಿ ಸೋಮವಾರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಮಿಳುನಾಡಿನಲ್ಲಿ ಈಗಾಗಲೇ ಈ ವ್ಯವಸ್ಥೆಯಿದೆ. ಇದೇ ರೀತಿ ನಮ್ಮಲ್ಲಿ ಜಾರಿಗೆ ತರುವದು ಎಷ್ಟು ಸೂಕ್ತ ಎಂದು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.

‘ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವನ್ನು ಪೊಲೀಸ್ ಠಾಣೆಯಾಗಿ ಪರಿವರ್ತಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ‘ಎಲ್ಲ ಜಿಲ್ಲೆಗಳಲ್ಲಿರುವ ನಿರ್ದೇಶನಾಲಯವನ್ನು ಪೊಲೀಸ್‌ ಠಾಣೆಯಾಗಿ ಪರಿವರ್ತಿಸಲಾಗಿದೆ. ಈಗ ಪ್ರಕರಣಗಳನ್ನು ದಾಖಲಿಸಲು ಮತ್ತು ಆರೋಪಿಗಳನ್ನು ಬಂಧಿಸಲು ಅವುಗಳಿಗೆ ಅಧಿಕಾರ ನೀಡಲಾಗಿದೆ’ ಎಂದರು.

ಇದನ್ನೂ ಓದಿ:World Cup;ಡ್ರೆಸ್ಸಿಂಗ್ ರೂಮ್ ನಲ್ಲಿ ಶಮಿ ಅಪ್ಪಿಕೊಂಡ ಪ್ರಧಾನಿ ಮೋದಿ: ಫೋಟೋ ವೈರಲ್

Advertisement

‘ಡಿ.4ರಿಂದ 15ರವರೆಗೆ ನಡೆಯಲಿರುವ ವಿಧಾನಮಂಡಲ ಅಧಿವೇಶನದ ಸಿದ್ಧತೆ ಪರಿಶೀಲಿಸಿದ್ದೇನೆ. ಭದ್ರತೆಗೆ 3,500 ಪೊಲೀಸರನ್ನು ನಿಯೋಜಿಸಲಾಗಿದೆ. ಅವರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಸೂಚಿಸಿದ್ದೇನೆ’ ಎಂದರು.

‘ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲಿನ ಪ್ರಕರಣಗಳ ಕುರಿತ ವಿಚಾರಣೆ ನಾಲ್ಕು ವರ್ಷಗಳಿಂದ ಬಾಕಿಯಿತ್ತು. ನಾನು ಬಂದ ಮೇಲೆ 500ಕ್ಕೂ ಹೆಚ್ಚು ಪ್ರಕರಣಗಳ ತನಿಖೆಗೆ ಆದೇಶಿದ್ದೇನೆ‌’ ಎಂದು ಹೇಳಿದರು.

‘ಸಂದರ್ಭ ಬಂದರೆ ನಾನು ದತ್ತಮಾಲೆ ಹಾಕುತ್ತೇನೆ’ ಎಂದು ಎಚ್‌.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಈಗ ಅವರ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಹೊಂದಾಣಿಕೆ ಸರಿಯಾಗಿ ಆಗಬೇಕಾದರೆ ಅವರು ದತ್ತಮಾಲೆ ಹಾಕಿಕೊಳ್ಳುತ್ತಾರೆ’ ಎಂದು ಲೇವಡಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next