Advertisement

CT Ravi: ಸುರ್ಜೇವಾಲ ನಿರ್ದೇಶನದನ್ವಯ ಬಿಎಸ್‌ವೈ ವಿರುದ್ಧ ಷಡ್ಯಂತ್ರ: ಸಿ.ಟಿ.ರವಿ

11:08 PM Jun 13, 2024 | Team Udayavani |

ಬೆಂಗಳೂರು:  ಮಾಜಿ ಸಿಎಂ ಯಡಿಯೂರಪ್ಪ ವಿಚಾರದಲ್ಲಿ ರಾಜ್ಯ ಸರಕಾರ  ದ್ವೇಷದ ರಾಜಕೀಯ ಮಾಡುತ್ತಿದೆ. ಬಿಜೆಪಿ ದಾಖಲಿಸಿದ ಪ್ರಕರಣ ಸಂಬಂಧ ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗುವ ಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ಸುರ್ಜೇವಾಲ ನಿರ್ದೇಶನದನ್ವಯ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ಈ ಷಡ್ಯಂತ್ರ ಹೆಣೆದಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

Advertisement

ವಿಧಾನ ಪರಿಷತ್‌ ಮುಖ್ಯ ಸಚೇತಕ ಎನ್‌.ರವಿಕುಮಾರ್‌, ಎಂಎಲ್‌ಸಿ ಛಲವಾದಿ ನಾರಾಯಣ ಸ್ವಾಮಿ ಜತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾದ್ದರಿಂದ ಬಿಜೆಪಿಯವರನ್ನು ಕೋರ್ಟ್‌ಗೆ ತಂದು ನಿಲ್ಲಿಸಬೇಕೆಂಬ ಕಾಂಗ್ರೆಸ್‌ನ  ದುರುದ್ದೇಶವು ಈಗ ಜಗಜ್ಜಾಹೀರಾಗಿದೆ ಎಂದು ದೂರಿದರು.

 ದಿಕ್ಕು ತಪ್ಪಿಸುವ ಉದ್ದೇಶ:

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ  “ಎಕ್ಸ್‌’ನಲ್ಲಿ ಆರೋಪಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next