Advertisement

Congress ಸರಕಾರ ಬೀಳಿಸಲು ಷಡ್ಯಂತ್ರ ನಡೆಸಲಾಗುತ್ತಿದೆ: ಡಿ.ಕೆ.ಶಿವಕುಮಾರ್

07:40 PM Jul 24, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವನ್ನು ಬೀಳಿಸಲು ‘ಹೊರಗೆ’ ಸಂಚು ರೂಪಿಸಲಾಗಿದೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ”ನಾವು ನೋಡುತ್ತೇವೆ. ನಮಗೂ ಖಚಿತ ಮಾಹಿತಿ ಇದೆ. ಇದು ಅವರ ತಂತ್ರ. ಬೆಂಗಳೂರಿನಲ್ಲಿ ಮಾಡುವ ಬದಲು ಹೊರಗೆ ಸಂಚು ಮಾಡುತ್ತಿದ್ದಾರೆ” ಎಂದರು.

ಶಿವಕುಮಾರ್ ಹೇಳಿಕೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಧನಿಗೂಡಿಸಿ ” ಬಿಜೆಪಿಯವರು ಅನೇಕ ಚುನಾಯಿತ ಸರ್ಕಾರಗಳನ್ನು ಉರುಳಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ಎಚ್ಚೆತ್ತುಕೊಳ್ಳಬೇಕಿದೆ. ಒಳ್ಳೆಯದು ಅಥವಾ ಕೆಟ್ಟದು ಎಂಬ ಭಾವನೆ ಇಲ್ಲ. ಅವರು ಮಾಡಿದ ಎಲ್ಲ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳು ನಮ್ಮ ಮುಂದಿವೆ. ಉಪಮುಖ್ಯಮಂತ್ರಿಯವರ ಬಳಿ ಇನ್ನೂ ಕೆಲವು ಮಾಹಿತಿ ಇರಬಹುದು’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next