Advertisement

ಬೆಳಗಾವಿ ಇಬ್ಭಾಗಕ್ಕೆ ಪಿತೂರಿ: ಹೋರಾಟದ ಎಚ್ಚರಿಕೆ

11:43 AM Nov 30, 2017 | Team Udayavani |

ಬೆಂಗಳೂರು: ಬೆಳಗಾವಿ ಜಿಲ್ಲೆಯ ಇಬ್ಭಾಗಕ್ಕೆ ಕನ್ನಡಿಗರು ಹಾಗೂ ರಾಜ್ಯಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ಕನ್ನಡಪರ  ಹೋರಾಟಗಾರ ವಾಟಾಳ್‌ ನಾಗರಾಜ್‌ ಕರೆ ನೀಡಿದರು. ನಗರದ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಕನ್ನಡ ಚಳವಳಿ ವಾಟಾಳ್‌ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

Advertisement

ಬೆಳಗಾವಿಯನ್ನು ಇಬ್ಭಾಗ ಮಾಡಲು ಶಿವಸೇನೆ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ ಪಿತೂರಿ ನಡೆಸುತ್ತಿದೆ. ಇದಕ್ಕೆ  ಸರ್ಕಾರ ಹಾಗೂ ಕನ್ನಡಿಗರು ಅವಕಾಶ ಮಾಡಿಕೊಡಬಾರದು. ಬೆಳಗಾವಿ ಇಬ್ಭಾಗವಾದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಶಿವಸೇನೆ ಮುಖಂಡ ಉದ್ಧವ್‌ ಠಾಕ್ರೆ ಅಥವಾ ಎಂಇಎಸ್‌ ಮುಖಂಡರು ರಾಜ್ಯಕ್ಕೆ ಆಗಮಿಸದಂತೆ ತಡೆಯಬೇಕು. ಎಂಇಎಸ್‌ ಗಡಿವಿಚಾರವನ್ನು ಮುಂದಿಟ್ಟುಕೊಂಡು ಬೆಳಗಾವಿ ಇಬ್ಭಾಗಕ್ಕೆ ಯತ್ನಿಸಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಎಂಇಎಸ್‌ ಅನುಕೂಲ ಸಿಂಧು ರಾಜಕಾರಣದ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next