Advertisement

ಪಾರದರ್ಶಕತೆಯಿಂದ ಕಾನ್ಸ್ ಟೇಬಲ್ಸ್,ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿ:ಆರಗ ಜ್ಞಾನೇಂದ್ರ

02:10 PM Oct 09, 2021 | Team Udayavani |

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ನಡೆಯುತ್ತಿರುವ ನಾಗರೀಕ ಕಾನ್ಸ್ ಟೇಬಲ್ಸ್ ಹಾಗೂ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳನ್ನು  ಅತ್ಯಂತ ಪಾರದರ್ಶಕ ಹಾಗೂ ನಿಯಮಾನುಗಳನುಸಾರ ನಡೆಸುತ್ತಿದ್ದು, ಅಭ್ಯರ್ಥಿಗಳು ಹಾಗೂ ಅವರುಗಳ ಪೋಷಕರು  ಯಾವುದೇ ರೀತಿಯ  ವದಂತಿಗಳಿಗೆ ಕಿವಿಗೊಡಬೇಡಿ, ಎಂದು ಗೃಹ ಸಚಿವ  ಆರಗ ಜ್ಞಾನೇಂದ್ರ  ಮನವಿ ಮಾಡಿದ್ದಾರೆ.

Advertisement

“ನೇಮಕಾತಿಯಲ್ಲಿ ಕೆಲಸ ಕೊಡಿಸುತ್ತೇನೆಂದು ಕೆಲವರು ನಂಬಿಕೆ ಹುಟ್ಟಿಸಿ, ಅಭ್ಯರ್ಥಿಗಳನ್ನು ವಂಚಿಸುತ್ತಿರುವ ಕೆಲವು ಘಟನೆಗಳು  ವರದಿಯಾಗಿದ್ದು, ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಅಂತಹ ಯಾವುದೇ ಆಮಿಷಗಳಿಗೆ ಬೆಲೆ ಕೊಡಬಾರದು” ಎಂದು ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ 947 ಸಬ್ ಇನ್ಸ್ಪೆಕ್ಟರ್ಸ್ ಹಾಗೂ 4000 ನಾಗರೀಕ ಕಾನ್ಸ್ಟೇಬಲ್ಸ್ ಹುದ್ದೆಗಳ ನೇಮಕಾತಿ  ನಡೆಯುತ್ತಿದ್ದು, ನೇಮಕಾತಿ ಪ್ರಕ್ರಿಯೆಯಗಳ ಭಾಗವಾಗಿ ನಡೆಯುತ್ತಿರುವ ದೈಹಿಕ ಸಾಮರ್ಥ್ಯತೆ  ಹಾಗೂ ಲಿಖಿತ ಪರೀಕ್ಷೆಗಳು,  ಅತ್ಯಂತ ಪಾರದರ್ಶಕವಾಗಿದ್ದು  ಇದರಲ್ಲಿ ದಾಖಲಾಗುವ ಫಲಿತಾಂಶಗಳೇ ಅಭ್ಯರ್ಥಿಗಳ ಆಯ್ಕೆಯ ಮಾನದಂಡ ಗಳಾಗಿರುತ್ತವೆ.

ಹುದ್ದೆ ಕೊಡಿಸುವುದಾಗಿ ಯಾರದರೂ ಆಮಿಷ ಒಡ್ಡಿದರೆ, ಅಭ್ಯರ್ಥಿಗಳು ಅಥವಾ ಅವರ ಪೋಷಕರು, ವಿಷಯವನ್ನು  ಪೊಲೀಸರಿಗೆ ತಿಳಿಸಬೇಕು, ಮತ್ತು  ವಂಚನೆಗೆ ಒಳಗಾಗುವುದರಿಂದ ತಪ್ಪಿಸಿಕೊಳ್ಳಬೇಕು, ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next