Advertisement

ಸ್ಥಿಮಿತ ಕಳೆದುಕೊಂಡ ಕಾಂಗ್ರೆಸ್‌ ನಾಯಕರು

06:20 AM Apr 16, 2018 | |

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮುನ್ನುಗ್ಗುತ್ತಿರುವ ವೇಗ ಸಹಿಸಿಕೊಳ್ಳಲಾಗದ ಕಾಂಗ್ರೆಸ್‌ ನಾಯಕರು ಮಾನಸಿಕ ಸ್ಥಿಮಿತ ಕಳೆದು ಕೊಂಡು ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಕಾಂಗ್ರೆಸ್‌ನಿಂದ ತಕ್ಷಣವೇ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

ಯೋಗಿ ಆದಿತ್ಯನಾಥ್‌ ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿದ್ದು, ದೇಶದ ಅತಿದೊಡ್ಡ ರಾಜ್ಯದ ಮುಖ್ಯಮಂತ್ರಿ ಹಾಗೂ ಪವಿತ್ರ
ಗೋರಖ್‌ನಾಥ್‌ ಮಠಕ್ಕೆ ಸೇರಿದವರಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಲಕ್ಷ ಕೋಟಿ ರೂ.ಗಳ ರೈತರ ಸಾಲ ಮತ್ತು ಬಡ್ಡಿಮನ್ನಾ ಮಾಡಿದ್ದಾರೆ.

ಅಪರಾಧಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇಂತಹ ಗೌರವಾನ್ವಿತ ವ್ಯಕ್ತಿ ಬಗ್ಗೆ ದಿನೇಶ್‌ ಗುಂಡೂರಾವ್‌ ಕೆಟ್ಟದಾಗಿ ಮಾತನಾಡಿ ರುವುದು ಖಂಡನೀಯ ಎಂದರು. ಹಿಂದೂ ಧರ್ಮಕ್ಕೆ, ಕಾವಿಧಾರಿಗಳಿಗೆ, ಧಾರ್ಮಿಕ ಭಾವನೆಗೆ ನೋವುಂಟುಮಾಡಿ, ಅಪಮಾನಿಸಿರುವ ದಿನೇಶ್‌ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು.

ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು. ಸಿದ್ದರಾಮಯ್ಯ ನಿಂತ ನೆಲ ಕುಸಿದಿದೆ: ಸಿಎಂ ಸಿದ್ದರಾಮಯ್ಯ ಅವರ ನಿಂತ ನೆಲ ಕುಸಿದಿದೆ. ಹೀಗಾಗಿಯೇ ಬಾದಾಮಿ ಕಡೆ ಮುಖ ಮಾಡಿದ್ದಾರೆ. ಅವರಿಗೆ ಸ್ವ ಕ್ಷೇತ್ರದಲ್ಲಿ ಸೋಲುವ ಭೀತಿ ಎದುರಾಗಿರ ಬಹುದು ಎಂದು ಶೋಭಾ ಕರಂದ್ಲಾಜೆ ಟೀಕಿಸಿದರು.ಅಶ್ವಥ್‌ ನಾರಾಯಣ, ತಿಂಗಳೆ ವಿಕ್ರಮಾ ರ್ಜುನ ಹೆಗ್ಗಡೆ 
ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next