Advertisement

ನಿರಂತರ ಉತ್ತಮ ಮಳೆ 

12:46 PM Jun 21, 2018 | Team Udayavani |

ಪುತ್ತೂರು: ತಾಲೂಕಿನ ನಗರ, ಗ್ರಾಮಾಂತರ ಭಾಗಗಳಲ್ಲಿ ಕಳೆದ ಮಂಗಳವಾರ, ಬುಧವಾರದ 48 ಗಂಟೆಗಳ ಅವಧಿಯಲ್ಲಿ ಉತ್ತಮ ಮಳೆ ಸುರಿದಿದೆ. ಮಂಗಳವಾರ ಬೆಳಗ್ಗಿನಿಂದ ನಿರಂತರ ಸಾಧಾರಣ ಮಳೆಯಾಗಿದೆ. ನೆಲ್ಯಾಡಿ, ಉಪ್ಪಿನಂಗಡಿ, ಕುಂಬ್ರ, ಈಶ್ವರಮಂಗಲ, ಸುಳ್ಯಪದವು, ಬೆಟ್ಟಂಪಾಡಿ, ಪುರುಷರ ಕಟ್ಟೆ ಮೊದಲಾದೆಡೆಗಳಲ್ಲಿ ಮಳೆ ಸುರಿಯಿತು. ಹಳ್ಳ, ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಚರಂಡಿ ಅವ್ಯವಸ್ಥೆಯಿಂದ ಹಲವೆಡೆಗಳಲ್ಲಿ ರಸ್ತೆಯಲ್ಲೇ ನೀರು ಹರಿಯಿತು.

Advertisement

ಸುಳ್ಯ: ಧಾರಾಕಾರ ಮಳೆ
ಸುಳ್ಯ ತಾಲೂಕಿನಲ್ಲಿ ದಿನವಿಡಿ ಧಾರಾಕಾರ ಮಳೆಯಾಗಿದೆ. ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ 120 ಮಿ.ಮೀ.ಕ್ಕಿಂತಲೂ ಹೆಚ್ಚು ಮಳೆ ಸುರಿದಿದೆ. ನದಿ, ಹೊಳೆಗಳಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿತ್ತು.

66 ವಿದ್ಯುತ್‌ ಕಂಬ ನಷ್ಟ
ನಗರ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಆಗಾಗ್ಗೆ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಎರಡು ದಿನಗಳ ಅವಧಿಯಲ್ಲಿ ಪುತ್ತೂರು ಮೆಸ್ಕಾಂ ವಿಭಾಗ ವ್ಯಾಪ್ತಿಯಲ್ಲಿ 66 ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ಸುಮಾರು 9.09 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌ ನರಸಿಂಹ ಅವರು ತಿಳಿಸಿದ್ದಾರೆ. ಯಾವುದೇ ಪ್ರಾಕೃತಿಕ ಹಾನಿಯ ವರದಿಯಾಗಿಲ್ಲ ಎಂದು ಕಂದಾಯ ಇಲಾಖೆಯ ಮಾಹಿತಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next