Advertisement

ಸಂವಿಧಾನ ಬದಲಾವಣೆ ಬಿಜೆಪಿಯ ಗುಪ್ತ ಕಾರ್ಯಸೂಚಿ : ಸಿದ್ದರಾಮಯ್ಯ

01:17 AM Mar 14, 2024 | Team Udayavani |

ಉಡುಪಿ: ಸಂಸದ ಅನಂತ ಕುಮಾರ್‌ ಹೆಗಡೆ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವುದಾಗಿ ತಿಳಿಸಿದ್ದರು. ಸಂವಿಧಾನ ಬದಲಾವಣೆ ಬಿಜೆಪಿಯ ಗುಪ್ತ ಕಾರ್ಯಸೂಚಿ. ಅದಕ್ಕೆ ಯಾರು ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

Advertisement

ಜಿಲ್ಲಾ ಗ್ಯಾರಂಟಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು, ಹಿಂದುಳಿದವರು, ದಲಿತರು, ರೈತರು, ಕಾರ್ಮಿಕರು, ಮಹಿಳೆಯರು ಸಂವಿಧಾನ ಬದಲಾ ವಣೆಯಾದರೆ ಬದುಕಲು ಸಾಧ್ಯವಿಲ್ಲ. ಮನುಸ್ಮತಿ, ಅಸಮಾನತೆಗೆ ಮರಳಿ ಹೋಗಲು ಸಾಧ್ಯವಿಲ್ಲ ಎಂದರು.

ಕರಾವಳಿ ಅಭಿವೃದ್ಧಿಗೆ ಒತ್ತು
ಮೀನುಗಾರಿಕೆ ಇಲಾಖೆಗೆ 3 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಇಡಲಾಗಿದೆ. ಮೀನುಗಾರರಿಗೆ 10 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದರು.

ಬಿಜೆಪಿ ಜನರ ಭಾವನೆ ಜತೆ ಆಟವಾಡಿದರೆ ಕಾಂಗ್ರೆಸ್‌ ಜನರ ಬದುಕು ಕಟ್ಟುವ ಕೆಲಸ ಮಾಡು ತ್ತಿದೆ. ರಾಜ್ಯ ಸರಕಾರ ಗ್ಯಾರಂಟಿ ಯೋಜ ನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಗ್ಯಾರಂಟಿ ಯೋಜನೆಗಳು ರದ್ದಾಗು ವುದಿಲ್ಲ. ವಿಪಕ್ಷಗಳು ಅನಾವಶ್ಯಕ ಟೀಕೆ ಮಾಡುತ್ತಿವೆ. ಅವುಗಳ ಸುಳ್ಳು ಪ್ರಚಾರಕ್ಕೆ ತಮ್ಮ ಮತಗಳ ಮೂಲಕ ತಡೆ ಹಾಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಗ್ರಹಿಸಿದರು.

ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ| ಅಂಶುಮಾನ್‌, ಗೇರು ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಕಾಂಗ್ರೆಸ್‌ ಮುಖಂಡರಾದ ಪ್ರಸಾದ್‌ರಾಜ್‌ ಕಾಂಚನ್‌, ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ದಿನೇಶ್‌ ಹೆಗ್ಡೆ ಮೊಳಹಳ್ಳಿ, ಮಾಜಿ ಶಾಸಕ ಗೋಪಾಲ ಪೂಜಾರಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ. ರೆಜು, ಐಜಿಪಿ ಬೋರಲಿಂಗಯ್ಯ, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌, ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಉಪಸ್ಥಿತರಿದ್ದರು.

Advertisement

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಶೆಟ್ಟಿನಿರೂಪಿಸಿದರು.

ಸಿಎಂ ಜತೆಗೆ ಬಂದ ಹೆಗ್ಡೆ
ಮಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಬಂದು ಆದಿಉಡುಪಿ ಹೆಲಿಪ್ಯಾಡ್‌ನ‌ಲ್ಲಿ ಇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್‌ನಿಂದ ಸ್ವಾಗತಿಸಲಾಯಿತು. ವಿಶೇಷವೆಂದರೆ ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರಿದ ಜಯಪ್ರಕಾಶ್‌ ಹೆಗ್ಡೆ ಕೂಡ ಸಿಎಂ ಅವರೊಂದಿಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಸಚಿವರು ಜತೆಗಿದ್ದರು. ಮಧ್ಯಾಹ್ನದ ಊಟಕ್ಕೆ ಮುಖ್ಯಮಂತ್ರಿ ನೀರ್‌ದೋಸೆ, ನಾಟಿಕೋಳಿ ಸಾರು ಹಾಗೂ ಮುದ್ದೆ ಸವಿದರು.

ಜಿಲ್ಲೆಯ ಎಲ್ಲ ಗ್ರಾ.ಪಂ., ನಗರಸ್ಥಳೀಯ ಸಂಸ್ಥೆಗಳಿಂದ ಜಿಲ್ಲಾಡಳಿತವೇ ಉಚಿತ ಬಸ್‌ ವ್ಯವಸ್ಥೆ ಮಾಡಿ ಸಮಾವೇಶಕ್ಕೆ ಫ‌ಲಾನುಭವಿಗಳನ್ನು ಕರೆತಂದಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದರು. ಫ‌ಲಾನುಭವಿಗಳಿಗೆ ಊಟ, ಉಪಾಹಾರದ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next